ಕನ್ಹಯ್ಯ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ: ಶಿವಸೇನೆ ಕಾರ್ಯಕರ್ತರು ಸೇರಿ ಮೂವರು ವಶಕ್ಕೆ!

ಕನ್ಹಯ್ಯ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ಕಾರ್ಯಕರ್ತರು ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕನ್ಹಯ್ಯ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ: ಶಿವಸೇನೆ ಕಾರ್ಯಕರ್ತರು ಸೇರಿ ಮೂವರು ವಶಕ್ಕೆ!
ಕನ್ಹಯ್ಯ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ: ಶಿವಸೇನೆ ಕಾರ್ಯಕರ್ತರು ಸೇರಿ ಮೂವರು ವಶಕ್ಕೆ!
Updated on

ಪಾಟ್ನಾ: ಕನ್ಹಯ್ಯ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ಕಾರ್ಯಕರ್ತರು ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪಾಟ್ನಾದ ಬಿಗಂಜ್ ನಲ್ಲಿ ಸಿಪಿಐ ನಾಯಕ ಕನ್ಹಯ್ಯ ಕುಮಾರ್ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಸಿಎಎ ವಿರೋಧಿ ಸಭೆಯನ್ನುದ್ದೇಶಿಸಿ ಮಾತನಾಡಲು ಹೋಗುವಾಗ ಕಲ್ಲು ತೂರಾಟ ನಡೆಸಲಾಗಿತ್ತು. 

ಅಷ್ಟೇ ಅಲ್ಲದೇ ವೇದಿಕೆಯನ್ನೂ ಧ್ವಂಸಗೊಳಿಸಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವವರು ಶಿವಸೇನೆಯ ಪದಾಧಿಕಾರಿಗಳೂ ಇದ್ದಾರೆ. ಪ್ರಕರಣದ ಕುರಿತು ವಿಚಾರಣೆ ಮುಂದುವರೆದಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com