ಭದ್ರತಾ ಕಾರಣ: ಜಮ್ಮು-ಕಾಶ್ಮೀರದ ಪಂಚಾಯತ್ ಉಪಚುನಾವಣೆ ಮುಂದೂಡಿಕೆ

ಜಮ್ಮು ಕಾಶ್ಮೀರದಲ್ಲಿ ಮಾರ್ಚ್​​ 5ರಿಂದ ಪಂಚಾಯತ್​ಗಳಿಗೆ ನಡೆಯಬೇಕಿದ್ದ ಉಪಚುನಾವಣೆಯನ್ನು ಭದ್ರತಾ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜಮ್ಮು ಕಾಶ್ಮೀರದ ಮುಖ್ಯ ಚುನಾವಣಾಧಿಕಾರಿ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಮಾರ್ಚ್​​ 5ರಿಂದ ಪಂಚಾಯತ್​ಗಳಿಗೆ ನಡೆಯಬೇಕಿದ್ದ ಉಪಚುನಾವಣೆಯನ್ನು ಭದ್ರತಾ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜಮ್ಮು ಕಾಶ್ಮೀರದ ಮುಖ್ಯ ಚುನಾವಣಾಧಿಕಾರಿ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.

ಮಾರ್ಚ್​​ 5ರಿಂದ 12,500ಕ್ಕೂ ಹೆಚ್ಚು ಪಂಚಾಯತ್​ ಸ್ಥಾನಗಳಿಗೆ 8 ಹಂತಗಳಲ್ಲಿ ಉಪಚುನಾವಣೆಯನ್ನು ನಡೆಸಲು ನಿರ್ಧರಿಸಲಾಗಿತ್ತು. ಗೃಹ ಇಲಾಖೆಯು ಭದ್ರತೆಗೆ ಸಂಬಂಧಿಸಿದ ಮಾಹಿತಿ ರವಾನಿಸಿದ ಬಳಿಕ, ಪಂಚಾಯತ್ ಉಪಚುನಾವಣೆಯನ್ನು ಮೂರು ವಾರ ಮುಂದೂಡಲಾಗಿದೆ ಎಂದು ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಪಂಚಾಯತ್ ಉಪಚುನಾವಣೆಯನ್ನು ಮಾರ್ಚ್​​ 5ರಿಂದ 20ರವರೆಗೆ ನಡೆಸಲು ನಿರ್ಧರಿಸಲಾಗಿತ್ತು. ಮಾರ್ಚ್​​​ 5, ಮಾರ್ಚ್​ 7, ಮಾರ್ಚ್​ 9, ಮಾರ್ಚ್​ 12, ಮಾರ್ಚ್​​ 14, ಮಾರ್ಚ್ 16, ಮಾರ್ಚ್​ 18 ಮತ್ತು ಮಾರ್ಚ್​ 20ರಂದು ಒಟ್ಟು 8 ಹಂತಗಳಲ್ಲಿ ಚುನಾವಣೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು.

ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಚುನಾವಣಾ ನೀತಿ ಸಂಹಿತೆಯನ್ನು ಜಾರಿ ಮಾಡಲಾಗಿತ್ತು. ಶೈಲೇಂದ್ರ ಕುಮಾರ್ ಮೊದಲ ಮತ್ತು ಎರಡನೇ ಹಂತದ ಚುನಾವಣೆಗಳಿಗೆ ಈಗಾಗಲೇ ಸುತ್ತೋಲೆ  ಹೊರಡಿಸಿದ್ದರು.

ಕೊನೆಯದಾಗಿ 2018ರಲ್ಲಿ ಪಂಚಾಯತ್​ ಚುನಾವಣೆಯನ್ನು ಪೀಪಲ್ಸ್​ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮತ್ತು ನ್ಯಾಷನಲ್ ಕಾನ್ಫೆರೆನ್ಸ್​ ​(ಎನ್​ಸಿ​) ಪಕ್ಷಗಳು ಬಹಿಷ್ಕರಿಸಿದ್ದವು. ಜಮ್ಮು ಕಾಶ್ಮೀರದ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಿ, ಯಾವುದೇ ರಾಜಕೀಯ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡದ ಪರಿಸ್ಥಿತಿಗಳ ನಡುವೆಯೇ ಚುನಾವಣಾಧಿಕಾರಿ ಶೈಲೇಂದ್ರ ಕುಮಾರ್ ಮಂಗಳವಾರ ಎಲ್ಲಾ ಪಕ್ಷಗಳ ಜೊತೆ ಸಭೆ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com