ನವದೆಹಲಿ: ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ಮಹಾಶಿವರಾತ್ರಿ ಹಬ್ಬವನ್ನು ದೇಶದಾದ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದ್ದು, ದೇಶದೆಲ್ಲೆಡೆ ಇರುವ ಶಿವ ದೇಗುಲಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ.
ಶಿವನ ದೇಗುಲಗಳಲ್ಲಿ ಭಕ್ತರು ಉಪವಾಸ ಮತ್ತು ಜಾಗರಣೆಯ ಮೂಲಕ ಶಿವ ಸ್ಮರಣೆ ಮಾಡಲು ವ್ಯವಸ್ಥೆಗಳನ್ನು ಮಡಾಲಾಗುತ್ತಿದೆ.
ಕರ್ನಾಟಕದ ಕಾಡು ಮಲ್ಲೇಶ್ವರ ಮಲ್ಲಿಕಾರ್ಜುನ ಸ್ವಾಮಿ, ದೇವಾಲಯ, ಗವಿಪುರದ ಗವಿ ಗಂಗಾಧರೇಶ್ವರ ದೇವಾಲಯ, ಗುಟ್ಟಹಳ್ಳಿಯ ಪಂಚಲಿಂಗೇಶ್ವರ ಸ್ವಾಮಿ ದೇವಾಲಯ, ಹಲಸೂರಿನ ಸೋಮೇಶ್ವರ, ಮುರುಗೇಶ್ವರ ದೇವಾಲಯ, ಮುರುಗೇಶಪಾಳ್ಯದ ಶಿವ ದೇವಾಲಯ, ಅನಂದರಾವ್ ವೃತ್ತದ ಶಿವಸಾಯಿ ದೇವಾಲಯ, ಮುಂಬಾನ ಬಬುಲ್ನಾಥ್ ದೇಗುಲ, ದೆಹಲಿಯ ಶ್ರೀ ಗೌರಿ ಶಂಕರ ದೇಗುಲ, ಅಮೃತಸರದ ಶಿವಾಲ ಬಾಘ್ ಭೈಯಾನ್ ದೇಗುಲ, ಕಲುಬರುಗಿಯ ಬ್ರಹ್ಮಕುಮಾರಿ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ.
ಇಂದು ಬೆಳಿಗ್ಗೆಯಿಂದಲೇ ಎಲ್ಲಾ ಶಿವ ದೇವಾಲಯಗಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ಶಿವನಿಗೆ ಬಿಲ್ವಪತ್ರ ಅರ್ಪಿಸುವ ಮೂಲಕ ಪೂಜೆ, ಮಂಗಳಾರತಿ, ಶಿವನ ಸ್ಮರಣೆ ನಡೆಯುತ್ತಿವೆ.
ಶಿವನ ಸಹಸ್ರ ನಾಮ ಪಠಣ, ವೇದಾಂತ ಉಪನ್ಯಾಸ, ಸಂಗೀತೋತ್ಸವ ಮತ್ತು ಅಹೋರಾತ್ರಿ ಶಿವನಾಮ ಜಪ ನಡೆಯುತ್ತದೆ. ದೇವಾಲಯಗಳಲ್ಲಿ ಹೆಚ್ಚು ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಎಲ್ಲಾ ದೇಗುಲಗಳಲ್ಲಿ ವಿಸೇಷ ವ್ಯವಸ್ತೆಗಳನ್ನು ಕಲ್ಪಿಸಲಾಗುತ್ತಿದೆ.
Advertisement