100 ಕೋಟಿ ಜನರ ಮಣಿಸಲು 15 ಕೋಟಿ ಮುಸ್ಲಿಮರು ಸಾಕು ಹೇಳಿಕೆ: ವಾರಿಸ್ ಪಠಾಣ್ ವಿರುದ್ದ ಪ್ರಕರಣ ದಾಖಲು

ಮುಸ್ಲಿಮರ ಜನಸಂಖ್ಯೆ ದೇಶದಲ್ಲಿ 15 ಕೋಟಿ ಕಮ್ಮಿಯೇ ಇರಬಹುದು. ಆದರೆ, ಅಗತ್ಯಬಿದ್ದರೆ 100 ಕೋಟಿ ಬಹುಸಂಖಾತರಿಗೆ ತಕ್ಕ ತಿರುಗೇಟು ನೀಡಬಲ್ಲರು ಎಂದು ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಎಐಎಂಐಎಂ ಮುಖಂಡ ವಾರಿಸ್ ಪಠಾಣ್ ವಿರುದ್ದ ಪ್ರಕರಣ ದಾಖಲಾಗಿದೆ. 
ವಾರಿಸ್ ಪಠಾಣ್
ವಾರಿಸ್ ಪಠಾಣ್

ಮುಂಬೈ: ಮುಸ್ಲಿಮರ ಜನಸಂಖ್ಯೆ ದೇಶದಲ್ಲಿ 15 ಕೋಟಿ ಕಮ್ಮಿಯೇ ಇರಬಹುದು. ಆದರೆ, ಅಗತ್ಯಬಿದ್ದರೆ 100 ಕೋಟಿ ಬಹುಸಂಖಾತರಿಗೆ ತಕ್ಕ ತಿರುಗೇಟು ನೀಡಬಲ್ಲರು ಎಂದು ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಎಐಎಂಐಎಂ ಮುಖಂಡ ವಾರಿಸ್ ಪಠಾಣ್ ವಿರುದ್ದ ಪ್ರಕರಣ ದಾಖಲಾಗಿದೆ. 

ವಾರಿಸ್ ವಿರುದ್ಧ ಬಿಜೆಪಿ ಯುವ ಸಂಘದ ನಾಯಕ ಪಾರಿಸ್ಮಾಲ್ ದೇಶಪಾಂಡೆ ಮುಂಬೈನ ಡೆಕ್ಕನ್ ಜಿಮ್ಖಾನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎರಡು ಸಮುದಾಯಗಳ ನಡುವೆ ಬಿರುಕು ಮೂಡಿಸುತ್ತಿರುವ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. 

ಪಠಾಣ್ ಅವರ ಹೇಳಿಕೆಯಿಂದ ಎರಡು ಸಮುದಾಯಗಳ ವಾತಾವರಣ ಹದಗೆಡಲಿದೆ. ಹೀಗಾಗಿ ಅವರ ವಿರುದ್ಧ ಐಪಿಸಿ ಸೆಕ್ಷನ್ 123ಎ, 295 ಎ ಮತ್ತು 504 ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com