ಪ್ರಧಾನಿ ಮೋದಿ ಜಾಗತಿಕವಾಗಿ ಯೋಚಿಸಿ, ಸ್ಥಳೀಯವಾಗಿ ಜಾರಿಗೊಳಿಸುವ ಬಹುಮುಖ ಪ್ರತಿಭೆ: ನ್ಯಾ. ಅರುಣ್ ಮಿಶ್ರಾ

ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಮಟ್ಟದಲ್ಲಿ ಮೆಚ್ಚುಗೆ ಪಡೆದ ದೂರದೃಷ್ಟಿ ಮತ್ತು ಬಹುಮುಖ ಪ್ರತಿಮೆ ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಶನಿವಾರ ಹಾಡಿ ಹೊಗಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಮಟ್ಟದಲ್ಲಿ ಮೆಚ್ಚುಗೆ ಪಡೆದ ದೂರದೃಷ್ಟಿ ಮತ್ತು ಬಹುಮುಖ ಪ್ರತಿಭೆ ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಶನಿವಾರ ಹಾಡಿ ಹೊಗಳಿದ್ದಾರೆ.

ಇಂದು ಅಂತರಾಷ್ಟ್ರೀಯ ನ್ಯಾಯಾಂಗ ಸಮ್ಮೇಳನ ಉದ್ದೇಶಿ ಮಾತನಾಡಿದ ನ್ಯಾ. ಅರುಣ್ ಮಿಶ್ರಾ ಅವರು, ಪ್ರಧಾನಿ ಮೋದಿ ಅವರು ಜಾಗತಿಕವಾಗಿ ಯೋಚಿಸಿ, ಅದನ್ನು ಸ್ಥಳೀಯವಾಗಿ ಕಾರ್ಯರೂಪಕ್ಕೆ ತರುತ್ತಾರೆ ಎಂದು ಹೇಳಿದ್ದಾರೆ.

ಮೋದಿ ನೇತೃತ್ವದ ಭಾರತ ವಿಶ್ವ ಸಮುದಾಯದಲ್ಲಿ ಅತ್ಯಂತ ಜವಾಬ್ದಾರಿಯುತ ಮತ್ತು ಅತ್ಯಂತ ಸ್ನೇಹಪರ ದೇಶವಾಗಿದೆ ಎಂದು ಮಿಶ್ರಾ ತಿಳಿಸಿದರು.

ಇದೇ ವೇಳೆ ಬಳಕೆಯಲ್ಲಿಲ್ಲದ 1,500 ಕಾನೂನುಗಳನ್ನು ತೆಗೆದುಹಾಕಿರುವುದನ್ನು ಪ್ರಧಾನಿ ಮೋದಿ ಹಾಗೂ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಮಿಶ್ರಾ ಅಭಿನಂದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com