ಭೋಪಾಲ್: ಪ್ರಧಾನಮಂತ್ರಿ ನರೇಂದ್ರ ಮೋದಿ ಮೂರನೇ ಪೀಳಿಗೆಯ ಆರ್ಥಿಕ ಸುಧಾರಣೆಗಳನ್ನು ತಂದಿದ್ದು ಸಕಾರಾತ್ಮಕ ಪರಿಣಾಮಗಳು ಕಂಡುಬರಲಿದೆ ಎಂದು ಹಣಕಾಸು ಖಾತೆ ಸಹಾಯಕ ಸಚಿವ ಜಯಂತ್ ಸಿನ್ಹಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಧ್ಯಪ್ರದೇಶದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1991 ರಲ್ಲಿ ಅಂದಿನ ಪ್ರಧಾನಿ ಪಿ.ವಿ.ನರಸಿಂಹ ರಾವ್ ಪ್ರಾರಂಭಿಸಿದ ಪ್ರಕ್ರಿಯೆಯನ್ನೇ ವಾಜಪೇಯಿ ಆಡಳಿತಾವಧಿಯಲ್ಲಿ ಮುಂದುವರಿಸಲಾಗಿತ್ತು ಎಂದು ವಿವರಿಸಿದರು. ಮಧ್ಯಪ್ರದೇಶದಲ್ಲಿ ವಿಪಕ್ಷ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು.
Advertisement