ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದಲ್ಲಿ ಎಫ್ಐಆರ್: ಆಪ್ ನಿಂದ ತಹಿರ್ ಹುಸೇನ್ ಅಮಾನತು 

ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದ ಎಫ್ಐಆರ್ ನಲ್ಲಿ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹಿರ್ ಹುಸೇನ್ ಹೆಸರು ಉಲ್ಲೇಖವಾಗಿದ್ದು, ಪಕ್ಷದಿಂದ ಆತನನ್ನು ಉಚ್ಛಾಟಿಸಲಾಗಿದೆ. 
ತಹಿರ್ ಹುಸೇನ್
ತಹಿರ್ ಹುಸೇನ್
Updated on

ನವದೆಹಲಿ: ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದ ಎಫ್ಐಆರ್ ನಲ್ಲಿ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹಿರ್ ಹುಸೇನ್ ಹೆಸರು ಉಲ್ಲೇಖವಾಗಿದ್ದು, ಪಕ್ಷದಿಂದ ಆತನನ್ನು ಉಚ್ಛಾಟಿಸಲಾಗಿದೆ. 

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪೊಲೀಸ್ ತನಿಖೆಯಲ್ಲಿ ತಾಹಿರ್ ಹುಸೇನ್ ನ ಮೇಲೆ ಶಂಕೆ ವ್ಯಕ್ತವಾಗಿದ್ದು ಆತನ ವಿರುದ್ಧ 302 ಐಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ. ಇದಕ್ಕೂ ಮುನ್ನ ವಿಡಿಯೋ ಹೇಳಿಕೆ ನೀಡಿದ್ದ ಹುಸೇನ್, ತಾನು ಈ ಪ್ರಕರಣದಲ್ಲಿ ಅಮಾಯಕ, ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ ಗಲಭೆಯ ನಾನೂ ಸಹ ಸಂತ್ರಸ್ತನಾಗಿದ್ದೇನೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com