ನವದೆಹಲಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಮಾದರಿಯಂತೆಯೇ ಇದೀಗ ದೆಹಲಿಯಲ್ಲೂ ಗಲಭೆಕೋರರಿಂದಲೇ ನಷ್ಟ ವಸೂಲಿ ಮಾಡಲು ದೆಹಲಿ ಪೊಲೀಸರು ಸಿದ್ಧತೆಯಲ್ಲಿ ತೊಡಗಿದ್ದಾರೆ.
ಹೌದು.. ದೆಹಲಿಯಲ್ಲಿ ನಡೆದ ಸಿಎಎ ಪರ-ವಿರೋಧಿ ಬಣಗಳ ನಡುವಿನ ಹಿಂಸಾಚಾರದಲ್ಲಿ ಸಂಭವಿಸಿದ ಅಪಾರ ಪ್ರಮಾಣದ ನಷ್ಟವನ್ನು ಗಲಭೆಕೋರರಿಂದಲೇ ಭರಿಸಲು ದೆಹಲಿ ಪೊಲೀಸರು ಮುಂದಾಗಿದ್ದಾರೆ. ಗಲಭೆ ಪ್ರಕರಣಗಳಲ್ಲಿ ಸಿಕ್ಕಿಬಿದ್ದಿರುವ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವುದು ಮಾತ್ರವಲ್ಲದೇ ಅವರಿಂದ ದಂಡ ವಸೂಲಿಗೂ ದೆಹಲಿ ಪೊಲೀಸ್ ಇಲಾಖೆ ಚಿಂತನೆಯಲ್ಲಿ ತೊಡಗಿದೆ. ಒಂದು ವೇಳೆ ದಂಡ ಪಾವತಿ ಮಾಡದಿದ್ದರೆ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲೂ ಸಹ ಚಿಂತಿಸಲಾಗುತ್ತಿದೆ.
ಈ ಸಂಬಂಧ ದೆಹಲಿ ಕ್ರೈಮ್ ಬ್ರಾಂಚ್ ಗೆ ಈಗಗಾಲೇ ದೆಹಲಿ ಪೊಲೀಸ್ ಆಯುಕ್ತರ ಕಚೇರಿಯಿಂದ ನಿರ್ದೇಶನ ತೆರಳಿದೆ ಎಂದು ಹೇಳಲಾಗುತ್ತಿದ್ದು, ಕ್ರೈಮ್ ಬ್ರಾಂಚ್ ನ ವಿಶೇಷ ತನಿಖಾದಳದ ಸಿಬ್ಬಂದಿ ಈ ಕುರಿತು ತನಿಖೆ ನಡೆಸಿ ಗಲಭೆ ಕೋರರ ಪಟ್ಟಿ ಸಿದ್ಧಪಡಿಸುತ್ತಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ಪೊಲೀಸ್ ಇಲಾಖೆ ಈವರೆಗೂ ಸುಮಾರು 1 ಸಾವಿರಕ್ಕೂ ಅಧಿಕ ಗಲಭೆಕೋರರನ್ನು ಗುರುತಿಸಿ ಪಟ್ಟಿ ಸಿದ್ಧ ಮಾಡಿದೆ. ಈ ಪೈಕಿ 630 ಮಂದಿಯನ್ನು ವಶಕ್ಕೆ ಪಡೆದಿದೆ.
ಅಂತೆಯೇ ಈ ಸಂಬಂಧ ದೆಹಲಿ ನಾಗರಿಕ ಅಧಿಕಾರಿಗಳು ಮತ್ತು ದೆಹಲಿ ಸರ್ಕಾರದೊಂದಿಗೆ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೆ ಏರಿಕೆ, ಅರೆಸೇನಾಪಡೆ ನಿಯೋಜನೆ, ಸಹಜಸ್ಥಿತಿಯತ್ತ ರಾಷ್ಟ್ರ ರಾಜಧಾನಿ
ದೆಹಲಿ ಹಿಂಸಾಚಾರ: ದ್ವೇಷ ಪೂರಿತ ಭಾಷಣ; ಕೇಂದ್ರ, ದೆಹಲಿ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್
ದ್ವೇಷ ಭಾಷಣ ಆರೋಪ ಮೇಲೆ ರಾಹುಲ್, ಸೋನಿಯಾ ವಿರುದ್ಧ ಎಫ್ಐಆರ್ ಕೋರಿ ಅರ್ಜಿ: ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ದೆಹಲಿ ನೂತನ ಪೊಲೀಸ್ ಆಯುಕ್ತರಾಗಿ ಎಸ್ ಎನ್ ಶ್ರೀವಾಸ್ತವ ನೇಮಕ
Advertisement