ವಾಯುಗಡಿ ನೀಲನಕ್ಷೆಗೆ, ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಗಡುವು

ಭಾರತೀಯ ವಾಯುಗಡಿಯನ್ನು ಮತ್ತಷ್ಟು ಶಕ್ತಿಶಾಲಿಗೊಳಿಸುವ ನಿಟ್ಟಿನಲ್ಲಿ ಬರುವ ಜೂನ್ ಅಂತ್ಯದೊಳಗೆ ನೀಲನಕ್ಷೆ ತಯಾರಿಸುವಂತೆ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ (ಸಿಡಿಎಸ್) ಅಧಿಕಾರ ಸ್ವೀಕರಿಸಿದ ಬಿಪಿನ್ ರಾವತ್, ಆದೇಶಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಭಾರತೀಯ ವಾಯುಗಡಿಯನ್ನು ಮತ್ತಷ್ಟು ಶಕ್ತಿಶಾಲಿಗೊಳಿಸುವ ನಿಟ್ಟಿನಲ್ಲಿ ಬರುವ ಜೂನ್ ಅಂತ್ಯದೊಳಗೆ ನೀಲನಕ್ಷೆ ತಯಾರಿಸುವಂತೆ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ (ಸಿಡಿಎಸ್) ಅಧಿಕಾರ ಸ್ವೀಕರಿಸಿದ ಬಿಪಿನ್ ರಾವತ್, ಆದೇಶಿಸಿದ್ದಾರೆ.

ಅಧಿಕಾರ ವಹಿಸಿಕೊಂಡ ನಂತರ ಇದು ಅವರ ಮೊದಲ ಆದೇಶವಾಗಿದೆ. ಇದಲ್ಲದೆ, ಭಾರತೀಯ ವಾಯುಗಡಿಯೊಳಗಿನ ಕೆಲವು ಪ್ರದೇಶಗಳಲ್ಲಿ ಮೂರೂ ಪಡೆಗಳ ಸಹಭಾಗಿತ್ವದ ಕಾವಲು ಹಾಗೂ ಜಂಟಿ ಹೋರಾಟ ಅನಿವಾರ್ಯವೂ ಆಗಿದೆ ಎಂದು ಪ್ರಸ್ತಾಪಿಸಿದ್ದಾರೆ.

ಇದಲ್ಲದೆ, ಭಾರತೀಯ ವಾಯುಗಡಿಯೊಳಗಿನ ಕೆಲವು ಪ್ರದೇಶಗಳಲ್ಲಿ ಮೂರೂ ಪಡೆಗಳ ಸಹಭಾಗಿತ್ವದ ಕಾವಲು ಹಾಗೂ ಜಂಟಿ ಹೋರಾಟ ಅನಿವಾರ್ಯವಿದೆ. ಅಂಥ ವಲಯಗಳನ್ನು ಗುರುತು ಮಾಡಿ ಅಲ್ಲಿ ಮೂರೂ ಪಡೆಗಳ ಪ್ರತಿನಿಧಿಗಳು ದಿನದ 24 ಗಂಟೆಯೂ ಸೇವೆಗೆ ಲಭ್ಯವಿರುವಂಥ ವ್ಯವಸ್ಥೆಯನ್ನು ಜಾರಿಗೆ ತರಲು ರಾವತ್‌ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಹೀಗೆ, ತ್ರಿವಳಿ ಪಡೆಗಳ ಸಹಭಾಗಿತ್ವಕ್ಕೆ ಪೂರಕವಾಗಿ ಯಾವ ಕ್ರಮಗಳನ್ನು ಮೂರೂ ಪಡೆಗಳು ಕೈಗೊಳ್ಳಬಹುದು ಎಂಬುದರ ಪ್ರಸ್ತಾವನೆಗಳನ್ನು ಸಲ್ಲಿಸಲು ಮೂರು ಪಡೆಗಳಿಗೆ ಡಿ. 31ರ ಗಡುವನ್ನು ರಾವತ್‌ ವಿಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com