ನಿಮ್ಮ ದೇಶದ ಬಗ್ಗೆ ಯೋಚನೆ ಮಾಡಿ: ಸಿಎಎ ಕುರಿತು ಸುಳ್ಳು ಸುದ್ದಿ ಟ್ವೀಟ್ ಮಾಡಿದ್ದ  ಪಾಕ್ ಪ್ರಧಾನಿಗೆ ಓವೈಸಿ ತಪರಾಕಿ! 

ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆಗೆ ಸಂಬಂಧಿಸಿದಂತೆ ನಕಲಿ ವಿಡಿಯೋವನ್ನು ಟ್ವೀಟ್ ಮಾಡಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. 
ನಿಮ್ಮ ದೇಶದ ಬಗ್ಗೆ ಯೋಚನೆ ಮಾಡಿ: ಸಿಎಎ ಕುರಿತು ಸುಳ್ಳು ಸುದ್ದಿ ಟ್ವೀಟ್ ಮಾಡಿದ್ದ  ಪಾಕ್ ಪ್ರಧಾನಿಗೆ ಓವೈಸಿ ತಪರಾಕಿ!
ನಿಮ್ಮ ದೇಶದ ಬಗ್ಗೆ ಯೋಚನೆ ಮಾಡಿ: ಸಿಎಎ ಕುರಿತು ಸುಳ್ಳು ಸುದ್ದಿ ಟ್ವೀಟ್ ಮಾಡಿದ್ದ  ಪಾಕ್ ಪ್ರಧಾನಿಗೆ ಓವೈಸಿ ತಪರಾಕಿ!
Updated on

ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆಗೆ ಸಂಬಂಧಿಸಿದಂತೆ ನಕಲಿ ವಿಡಿಯೋವನ್ನು ಟ್ವೀಟ್ ಮಾಡಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. 

ಬಾಂಗ್ಲಾದಲ್ಲಿ ಪೊಲೀಸರು ಜನರ ಮೇಲೆ ದೌರ್ಜನ್ಯ ನಡೆಸುತ್ತಿದ್ದ ವಿಡಿಯೋವನ್ನು ಟ್ವೀಟ್ ಮಾಡಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅದನ್ನು ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನಾಕಾರರ ಮೇಲಿನ ದೌರ್ಜನ್ಯ ಎಂದು ಹೇಳಿದ್ದರು. 

ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಇಮ್ರಾನ್ ಖಾನ್ ವಿರುದ್ಧ ವಾಗ್ದಾಳಿ ನಡೆಸಿರುವ ಅಸಾದುದ್ದೀನ್ ಓವೈಸಿ, ನಿಮ್ಮ ದೇಶದ ಬಗ್ಗೆ ಯೋಚನೆ ಮಾಡಿ ಭಾರತದ ಮುಸ್ಲಿಮರ ಬಗ್ಗೆಯಲ್ಲ ಎಂದು ತಿರುಗೇಟು ನೀಡಿದ್ದಾರೆ. 

ಬಾಂಗ್ಲಾದೇಶದ ವಿಡಿಯೋವನ್ನು ಹಂಚಿಕೊಂಡಿರುವ ಇಮ್ರಾನ್ ಖಾನ್ ಅದನ್ನು ಭಾರತದ್ದೆಂದು ಹೇಳಿದ್ದಾರೆ. ಮಿಸ್ಟರ್ ಖಾನ್ ನೀವು ನಿಮ್ಮ ದೇಶದ ಬಗ್ಗೆ ಯೋಚನೆ ಮಾಡಿ, ನಾವು ಜಿನ್ನಾ ಥಿಯರಿಯನ್ನು ತಿರಸ್ಕರಿಸುತ್ತೇವೆ. ನಾವು ಹೆಮ್ಮೆಯ ಭಾರತೀಯ ಮುಸ್ಲಿಮರು ಹಾಗೆಯೇ ಇರುತ್ತೇವೆ ಎಂದು ಓವೈಸಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com