ಅಂತಿಮ ಘಟ್ಟ ತಲುಪಿದ ಶಬರಿಮಲೆ ಯಾತ್ರೆ: ಇಂದು ಸಂಜೆ 6.45ಕ್ಕೆ ಮಕರಜ್ಯೋತಿ ದರ್ಶನ

ಪ್ರಸಕ್ತ ಸಾಲಿನ ಶಬರಿಮಲೆ ಯಾತ್ರೆ ಅಂತಿಮ ಘಟ್ಟ ತಲುಪಿದ್ದು, ಜನವರಿ 15ರ ಬುಧವಾರ ಸಂಜೆ 6.45ಕ್ಕೆ ಮಕರಜ್ಯೋತಿ ದರ್ಶನವಾಗಲಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶಬರಿಮಲೆ: ಪ್ರಸಕ್ತ ಸಾಲಿನ ಶಬರಿಮಲೆ ಯಾತ್ರೆ ಅಂತಿಮ ಘಟ್ಟ ತಲುಪಿದ್ದು, ಜನವರಿ 15ರ ಬುಧವಾರ ಸಂಜೆ 6.45ಕ್ಕೆ ಮಕರಜ್ಯೋತಿ ದರ್ಶನವಾಗಲಿದೆ. 

ಪೊನ್ನಂಬಳಮೇಡಂ ಬೆಟ್ಟದಲ್ಲಿ ನಾಳೆ ಸಂಜೆ ಮಕರ ಜ್ಯೋತಿ ದರ್ಶನವಾಗಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಸೋಮವಾರ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಶುದ್ಧೀಕರಣ ಪ್ರಕ್ರಿಯೆಗಳನ್ನು ನಡೆಸಲಾಗಿದೆ. 

ಮಂಗಳವಾರ ಪಂಪ ವಿಳಕ್ಕು ಹಾಗೂ ಪಂಪಸಧ್ಯ ಪೂಜಗಳು ನಡೆಯಲಿದೆ. ಮಂಗಳವಾರ ತಡರಾತ್ರಿ 2 ಗಂಟೆಯಿಂದ ಮಕರ ಸಂಕ್ರಮಣ ಪೂಜೆಗಳು ನಡೆಯಲಿದ್ದು, ಬುಧವಾರ ಸಂಜೆ 6.45ರ ವೇಳಗೆ ಪೊನ್ನಂಬಳಮೇಡುವಿನಲ್ಲಿ ಪವಿತ್ರ ಮಕರ ಜ್ಯೋತಿಯ ದರ್ಶನವಾಗಲಿದೆ. 

ತದನಂತರ ಜನವರಿ 16ರಿಂದ 20ರವರೆಗೆ ಸಾರ್ವಜನಿಕ ದರ್ಶನಕ್ಕೆ ದೇಗುಲ ತೆರೆದಿರಲಿದ್ದು, ಜನವರಿ 21 ರಂದು ಪಂದಳ ರಾಜ ಮನೆತನದ ಪೂಜಾ ಕಾರ್ಯಗಳು ಅಂತಿಮಗೊಂಡ ಬಳಿಕ ದೇಗುಲದ ಬಾಗಿಲು ಮುಚ್ಚಲಿದೆ ಎಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com