ಏಪ್ರಿಲ್ 1ರಿಂದ ಎನ್'ಪಿಆರ್ ಆರಂಭ: ತಪ್ಪು ಮಾಹಿತಿ ನೀಡಿದವರಿಗೆ ರೂ.1000 ದಂಡ

ಏಪ್ರಿಲ್ 1 ರಿಂದ ದೇಶದಾದ್ಯಂತ ಎನ್'ಪಿಆರ್ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದು, ಪ್ರಕ್ರಿಯೆ ಸಂದರ್ಭದಲ್ಲಿ ಗಣತಿದಾರರಿಗೆ ಜನರು ತಪ್ಪು ಅಥವಾ ಸುಳ್ಳು ಮಾಹಿತಿ ನೀಡುವುದು, ಮಾಹಿತಿ ನೀಡಲು ನಿರಾಕರಿಸುವುದನ್ನು ಮಾಡಿದರೆ ರೂ.1000ಕ ದಂಟ ತೆರಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಏಪ್ರಿಲ್ 1 ರಿಂದ ದೇಶದಾದ್ಯಂತ ಎನ್'ಪಿಆರ್ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದು, ಪ್ರಕ್ರಿಯೆ ಸಂದರ್ಭದಲ್ಲಿ ಗಣತಿದಾರರಿಗೆ ಜನರು ತಪ್ಪು ಅಥವಾ ಸುಳ್ಳು ಮಾಹಿತಿ ನೀಡುವುದು, ಮಾಹಿತಿ ನೀಡಲು ನಿರಾಕರಿಸುವುದನ್ನು ಮಾಡಿದರೆ ರೂ.1000ಕ ದಂಟ ತೆರಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ. 

ಈ ಕುರಿತು ಗೃಹ ಸಚಿವಾಲಯ ಮಾಹಿತಿ ನೀಡಿದ್ದು, ನಾಗರೀಕತ್ವ ನಿಯಮ-17ರ ಪ್ರಕಾರ ತಪ್ಪು ಮಾಹಿತಿ ನೀಡಿದವರಿಗೆ ರೂ.1 ಸಾವಿರ ದಂಡ ಹಾಕಲು ಅವಕಾಶವಿದೆ ಎಂದು ಹೇಳಿದೆ. ಆದರೆ, 2011 ಹಾಗೂ 2015ರಲ್ಲಿ ನಡೆದ ಎನ್'ಪಿಆರ್ ಪ್ರಕ್ರಿಯೆ ವೇಳೆ ಈ ನಿಯಮವನ್ನು ಹೆಚ್ಚು ಬಳಕೆ ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ. 

ಇತ್ತೀಚೆಗೆ ನಡೆದ ಎನ್'ಪಿಆರ್, ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲೇಖಕಿ ಅರುಂಧತಿ ರಾಯ್ ಅವರು, ಎನ್'ಪಿಆರ್ ಗಣತಿದಾರರು ನಿಮ್ಮ ಮನೆಗೆ ಬಂದರೆ ಅವರಿಗೆ ತಪ್ಪು ಮಾಹಿತಿ ನೀಡಿ. ನಿಮ್ಮ ಹೆಸರನ್ನು ರಂಗಾ-ಬಿಲ್ಲಾ, ಕುಂಗ್ ಫು-ಕಟ್ಟಾ ಎಂದು ಬರೆಸಿರಿ ಎಂದು ಕರೆ ನೀಡಿದ್ದರು. ಈಗಾಗಲೇ ಎನ್'ಪಿಆರ್'ಗೆ ಕೇರಳ ಹಾಗೂ ಪಶ್ಚಿಮ ಬಂಗಾಳ ಸರ್ಕಾರಗಳು ಬಹಿಷ್ಕಾರ ಹಾಕಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com