'ಸಾವಿನ ಭಯ' ಜೈಲಿನಲ್ಲಿ ನಿರ್ಭಯಾ ಅತ್ಯಾಚಾರಿಗಳ ರಂಪಾಟ, ಕೊನೆ ಆಸೆಗೆ ನಕಾರ!

ನಿರ್ಭಯಾ ಅತ್ಯಾಚಾರಿ ಮಾಡಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದರೂ ನೇಣು ಕುಣಿಕೆಯಿಂದ ತಪ್ಪಿಸಿಕೊಂಡು ಬರುತ್ತಿದ್ದ ಅಪರಾಧಿಗಳಿಗೆ ಇದೀಗ ಸಾವಿನ ಭಯ ಶುರುವಾಗಿದ್ದು ಜೈಲಿನಲ್ಲಿ ರಂಪಾಟ ಶುರು ಮಾಡಿದ್ದಾರೆ. ಅಲ್ಲದೆ ತಮ್ಮ ಕೊನೆಯ ಆಸೆಯನ್ನು ನಿರಾಕರಿಸುತ್ತಿದ್ದಾರೆ ಎಂದು ತಿಹಾರ್ ಜೈಲು ಅಧಿಕಾರಿಗಳು ತಿಳಿಸಿದ್ದಾರೆ. 
ನಿರ್ಭಯಾ ಅತ್ಯಾಚಾರಿಗಳು
ನಿರ್ಭಯಾ ಅತ್ಯಾಚಾರಿಗಳು
Updated on

ನಿರ್ಭಯಾ ಅತ್ಯಾಚಾರಿ ಮಾಡಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದರೂ ನೇಣು ಕುಣಿಕೆಯಿಂದ ತಪ್ಪಿಸಿಕೊಂಡು ಬರುತ್ತಿದ್ದ ಅಪರಾಧಿಗಳಿಗೆ ಇದೀಗ ಸಾವಿನ ಭಯ ಶುರುವಾಗಿದ್ದು ಜೈಲಿನಲ್ಲಿ ರಂಪಾಟ ಶುರು ಮಾಡಿದ್ದಾರೆ. ಅಲ್ಲದೆ ತಮ್ಮ ಕೊನೆಯ ಆಸೆಯನ್ನು ನಿರಾಕರಿಸುತ್ತಿದ್ದಾರೆ ಎಂದು ತಿಹಾರ್ ಜೈಲು ಅಧಿಕಾರಿಗಳು ತಿಳಿಸಿದ್ದಾರೆ.  

ದೆಹಲಿ ಕೋರ್ಟ್ ಇದೀಗ ಎರಡನೇ ಬಾರಿಗೆ ಅಪರಾಧಿಗಳಿಗೆ ಡೆತ್ ವಾರೆಂಟ್ ಹೊರಡಿಸಿದೆ. ಜನವರಿ 21ಕ್ಕೆ ಮೊದಲಿಗೆ ಡೆತ್ ವಾರೆಂಟ್ ಜಾರಿ ಮಾಡಲಾಗಿತ್ತು. ಆದರೆ ನಾಲ್ವರು ಅಪರಾಧಿಗಳ ಪೈಕಿ ಒಬ್ಬ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರಿಂದ ಈ ದಿನಾಂಕ ಮುಂದಕ್ಕೆ ಹೋಗಿ ಇದೀಗ ಫೆ.1ಕ್ಕೆ ದೆಹಲಿ ಕೋರ್ಟ್ ಡೆತ್ ವಾರೆಂಟ್ ಜಾರಿ ಮಾಡಿದೆ. 

ಈ ನಡುವೆ ನೇಣು ತಪ್ಪಿಸಿಕೊಳ್ಳಲು ನಿರ್ಭಯಾ ರೇಪ್ ಹಾಗೂ ಕೆಲೆ ಪ್ರಕರಣದ ದೋಷಿ ಪವನ್ ಗುಪ್ತಾ ಹೊಸ ದಾಳವನ್ನು ಉರುಳಿಸಿದ್ದು, ಅತ್ಯಾಚಾರ ನಡೆದಾಗ ನಾನು ಅಪ್ರಾಪ್ತ ಬಾಲಕನಾಗಿದ್ದೆ ಎಂದು ಹೇಳಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ. ನನ್ನನ್ನು ಬಾಲಾರೋಪಿ ಎಂದು ಪರಿಗಣಿಸಿ ಎಂದು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com