ರಜನಿಕಾಂತ್ ಹೇಳಿಕೆ ಬೆನ್ನಲ್ಲೇ ತಮಿಳುನಾಡಲ್ಲಿ ಪೆರಿಯಾರ್ ಪ್ರತಿಮೆ ಧ್ವಂಸ
ರಜನಿಕಾಂತ್ ಹೇಳಿಕೆ ಬೆನ್ನಲ್ಲೇ ತಮಿಳುನಾಡಲ್ಲಿ ಪೆರಿಯಾರ್ ಪ್ರತಿಮೆ ಧ್ವಂಸ

ರಜನಿಕಾಂತ್ ಹೇಳಿಕೆ ಬೆನ್ನಲ್ಲೇ ತಮಿಳುನಾಡಲ್ಲಿ ಪೆರಿಯಾರ್ ಪ್ರತಿಮೆ ಧ್ವಂಸ

ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಸಲವಕ್ಕಂ ಎಂಬಲ್ಲಿ ತಮಿಳು ಸಮಾಜ ಸುಧಾರಕ ಇ.ವಿ.ರಾಮಸ್ವಾಮಿ ಪೆರಿಯಾರ್ ಅವರ ಪುತ್ಥಳಿಯನ್ನು ಭಗ್ನಗೊಳಿಸಿದ ಘಟನೆ ಶುಕ್ರವಾರ ನಡೆದಿದೆ. 
Published on

ಚೆನ್ನೈ: ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಸಲವಕ್ಕಂ ಎಂಬಲ್ಲಿ ತಮಿಳು ಸಮಾಜ ಸುಧಾರಕ ಇ.ವಿ.ರಾಮಸ್ವಾಮಿ ಪೆರಿಯಾರ್ ಅವರ ಪುತ್ಥಳಿಯನ್ನು ಭಗ್ನಗೊಳಿಸಿದ ಘಟನೆ ಶುಕ್ರವಾರ ನಡೆದಿದೆ. 

ಇತ್ತೀಚೆಗೆ ನಟ, ರಾಜಕಾರಣಿ ರಜನೀಕಾಂತ್ ಅವರು, ಪೆರಿಯಾರ್ ನಡೆಸಿದ ರ್ಯಾಲಿಯಲ್ಲಿ ಶ್ರೀರಾಮ-ಸೀತಾಮಾತೆಯರ ಬೆತ್ತಲೆ ಚಿತ್ರದ ಮೆರವಣಿಗೆ ಮಾಡಲಾಗಿದ್ದು ಎಂದು ಆರೋಪಿಸಿದ್ದರು. ಈ ಹೇಳಿಕೆಯಿಂದ ವಿವಾದ ಸೃಷ್ಟಿಯಾಗಿದ್ದು, ಇದರ ನಡುವೆಯೇ ಪ್ರತಿಮೆ ಭಗ್ನ ನಡೆದಿದೆ,

ಪ್ರತಿಮೆ ಭಗ್ನವಾಗಿದ್ದನ್ನು ಜನರು ಗಮನಿಸುತ್ತಿದ್ದಂತೆಯೇ ಉದ್ವಿಗ್ನ ವಾತಾವರಣ ಸೃಷ್ಟಿಯಾಯಿತು. ಅಲ್ಲದೆ, ರಾಜಕೀಯ ಆರೋಪ, ಪ್ರತ್ಯಾರೋಪಗಳೂ ಆರಂಭಗೊಂಡವು. ಈ ಹಿನ್ನೆಲೆಯಲ್ಲಿ ಸಮಾಜ ಘಾತುಕ ಶಕ್ತಿಗಳ ವಿರದ್ಧ ಕಠಿಣ ಕ್ರಮ ಜರುಗಿಸುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com