ನವದೆಹಲಿ: ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದೇಶದ ಪ್ರತೀಯೊಬ್ಬ ಪ್ರಜೆಗೂ ಗಣರಾಜ್ಯೋತ್ಸವ ದಿನಾಚರಣೆಯ ಶುಭಾಶಯಗಳು. ಜೈ ಹಿಂದ್! ಎಂದು ಹೇಳಿದ್ದಾರೆ.
ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ರಾಜಧಾನಿ ದೆಹಲಿಯ ರಾಜ್ ಪಥ್ ನಲ್ಲಿ ಬೆಳಿಗ್ಗೆ 7 ರಿಂದ 11.30ರವರೆಗೆ ಪಥಸಂಚಲನ ನಡೆಯಲಿದೆ. ಭವ್ಯ ಸಮಾರಂಭದಲ್ಲಿ ಬ್ರೆಜಿಲ್ ರಾಷ್ಟ್ರದ ಅಧ್ಯಕ್ಷ ಜೈರ್ ಬೋಲ್ಸನಾರೋ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
Advertisement