ಅಮಾನತುಲ್ಲಾ ಖಾನ್
ಅಮಾನತುಲ್ಲಾ ಖಾನ್

ಹಣ ದುರ್ಬಳಕೆ ಆರೋಪ: ಆಪ್ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ಕೇಸ್ ದಾಖಲಿಸಿದ ಎಸಿಬಿ

ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಮಧ್ಯೆಯೇ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಆಡಳಿತರೂಢ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಕೇಸ್ ದಾಖಲಿಸಿದೆ.
Published on

ನವದೆಹಲಿ: ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಮಧ್ಯೆಯೇ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಆಡಳಿತರೂಢ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಕೇಸ್ ದಾಖಲಿಸಿದೆ.

ಖಾನ್ ವಿರುದ್ಧ ವಕ್ಫ್ ಮಂಡಳಿಯ ಅನುದಾನ ದುರ್ಬಳಕೆ ಮತ್ತು ಅಕ್ರಮ ನೇಮಕಾತಿ ಆರೋಪ ಕೇಳಿಬಂದಿದೆ.

ನಾವು ಅಮಾನತುಲ್ಲಾ ಖಾನ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ಪ್ರಕರಣ ತನಿಖೆ ಆರಂಭಿಸಿದ್ದು, ಅವರು ಎಷ್ಟು ಪ್ರಮಾಣದ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದ ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com