ಉತ್ತರ ಪ್ರದೇಶದಲ್ಲಿ ಗೂಂಡಾರಾಜ್ಯ ಇದೆ ಎನ್ನಲು ಕಾನ್ಪುರ ಘಟನೆ ಮತ್ತೊಂದು ಸಾಕ್ಷಿ: ರಾಹುಲ್ ಗಾಂಧಿ

ಕಾನ್ಪುರದಲ್ಲಿ ನಡೆದ ಎನ್ಕೌಂಟರ್ ನಲ್ಲಿ 8 ಮಂದಿ ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು, ಈ ಘಟನೆ ಉತ್ತರಪ್ರದೇಶ ರಾಜ್ಯದಲ್ಲಿ ಗೂಂಡಾರಾಜ್ಯವಿದೆ ಎನ್ನಲು ಮತ್ತೊಂದು ಸಾಕ್ಷ್ಯವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಕಾನ್ಪುರದಲ್ಲಿ ನಡೆದ ಎನ್ಕೌಂಟರ್ ನಲ್ಲಿ 8 ಮಂದಿ ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು, ಈ ಘಟನೆ ಉತ್ತರಪ್ರದೇಶ ರಾಜ್ಯದಲ್ಲಿ ಗೂಂಡಾರಾಜ್ಯವಿದೆ ಎನ್ನಲು ಮತ್ತೊಂದು ಸಾಕ್ಷ್ಯವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ. 

ಕಾನ್ಪುರ ಎನ್ಕೌಂಟರ್ ಘಟನೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಉತ್ತರಪ್ರದೇಶದಲ್ಲಿ ಗೂಂಡಾರಾಜ್ಯ ಇದೆ ಎನ್ನಲು ಈ ಘಟನೆ ಮತ್ತೊಂದು ಸಾಕ್ಷ್ಯಾಗಿದೆ. ಪೊಲೀಸರೇ ಸುರಕ್ಷಿತವಾಗಿಲ್ಲ ಎಂದರೆ, ಸಾರ್ವಜನಿಕರ ಕತೆಯೇನು? ಎಂದು ಪ್ರಶ್ನಿಸಿದ್ದಾರೆ. 

ಘಟನೆಯಲ್ಲಿ ಸಾವನ್ನಪ್ಪಿದ ಪೊಲೀಸರ ಕುಟುಂಬಸ್ಥರ ಕುರಿತು ಸಂತಾಪ ಸೂಚಿಸುತ್ತೇನೆ. ಗಾಯಗೊಂಡಿರುವ ಪೊಲೀಸರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com