ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರದ ಕೊರತೆ ಇಲ್ಲ: ಡಿ.ವಿ. ಸದಾನಂದಗೌಡ

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಅವರು ಹೇಳಿದ್ದಾರೆ.
ಮಧ್ಯ ಪ್ರದೇಶ ಸಿಎಂ ಹಾಗೂ ಸದಾನಂದಗೌಡ
ಮಧ್ಯ ಪ್ರದೇಶ ಸಿಎಂ ಹಾಗೂ ಸದಾನಂದಗೌಡ
Updated on

ನವದೆಹಲಿ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿ, ಅಗತ್ಯ ಪ್ರಮಾಣದಷ್ಟು ರಸಗೊಬ್ಬರವನ್ನು ಈಗಾಗಲೇ ರಾಜ್ಯಗಳಿಗೆ ಪೂರೈಸಿ, ದಾಸ್ತಾನು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನವದೆಹಲಿಯಲ್ಲಿಂದು ತಮ್ಮನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರೊಂದಿಗೆ ಸಮಾಲೋಚನೆ ನಡೆಸಿದ ನಂತರ ಈ ವಿಷಯ ತಿಳಿಸಿದ ಡಿ.ವಿ. ಸದಾನಂದಗೌಡ, ರಸಗೊಬ್ಬರ ಸಚಿವಾಲಯ ನಿರಂತರವಾಗಿ ರಸಗೊಬ್ಬರ ಲಭ್ಯತೆಯ ಬಗ್ಗೆ ತೀವ್ರ ನಿಗಾ ಇರಿಸಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಂದ ಯೂರಿಯಾ ಪೂರೈಕೆಗೆ ಬೇಡಿಕೆ ಎದುರಾದರೆ ಅದನ್ನು ಪೂರೈಸಲು ಬದ್ಧವಿದೆ ಎಂದರು. 

ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ರೈತರಿಗೆ ಸಕಾಲದಲ್ಲಿ ಕೈಗೆಟಕುವ ದರದಲ್ಲಿ ಸೂಕ್ತ ಪ್ರಮಾಣದ ರಸಗೊಬ್ಬರ ಪೂರೈಕೆಯನ್ನು ಖಾತ್ರಿಪಡಿಸಲು ಬದ್ಧವಾಗಿದೆ ಎಂದು ಅವರು ಹೇಳಿದರು.

ಮೇ ಮತ್ತು ಜೂನ್ ಅವಧಿಯಲ್ಲಿ ದೇಶಾದ್ಯಂತ ನಿರೀಕ್ಷೆಗಿಂತ ಉತ್ತಮ ಮಳೆಯಾಗಿದ್ದರಿಂದ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಡಿಬಿಟಿ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ.

ಹೆಚ್ಚುವರಿಯಾಗಿ ರಸಗೊಬ್ಬರಕ್ಕೆ ಯಾವುದೇ ಬೇಡಿಕೆ ಎದುರಾದರೂ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಜೊತೆ  ಸಮಾಲೋಚಿಸಿ, ದೇಶೀಯ ಉತ್ಪಾದನೆ ಹೆಚ್ಚಳ ಮತ್ತು ಆಮದು ಮೂಲಕ ಪೂರೈಕೆ ಮಾಡಲಾಗುವುದು ಎಂದು ಸಚಿವ ಸದಾನಂದ ಗೌಡ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com