ಪ್ಲಾಸ್ಮಾ ದಾನ ಮಾಡಲು ಮಹಾರಾಷ್ಟ್ರ ಸಚಿವ ಜಿತೇಂದ್ರ ಅಹ್ವಾದ್ ಮುಂದು

ಕೊರೋನಾ ಸೋಂಕಿನಿಂದ ಗುಣಮುಖವಾಗಿರುವ ಮಹಾರಾಷ್ಟ್ರ ವಸತಿ ಸಚಿವ ಜಿತೇಂದ್ರ ಅಹ್ವಾದ್ ಬೇರೆ ಕೊರೋನಾ ರೋಗಿಗಳ ಚಿಕಿತ್ಸೆಗಾಗಿ ಪ್ಲಾಸ್ಮಾ ದಾನ ಮಾಡುವುದಾಗಿ ತಿಳಿಸಿದ್ದಾರೆ.
ಜಿತೇಂದ್ರ ಅಹ್ವಾದ್
ಜಿತೇಂದ್ರ ಅಹ್ವಾದ್

ಮುಂಬಯಿ: ಕೊರೋನಾ ಸೋಂಕಿನಿಂದ ಗುಣಮುಖವಾಗಿರುವ ಮಹಾರಾಷ್ಟ್ರ ವಸತಿ ಸಚಿವ ಜಿತೇಂದ್ರ ಅಹ್ವಾದ್ ಬೇರೆ ಕೊರೋನಾ ರೋಗಿಗಳ ಚಿಕಿತ್ಸೆಗಾಗಿ ಪ್ಲಾಸ್ಮಾ ದಾನ ಮಾಡುವುದಾಗಿ ತಿಳಿಸಿದ್ದಾರೆ.

ಮುಂಬ್ರಾ-ಕಾಲ್ವಾ ವಿಧಾನಸಭೆ ಕ್ಷೇತ್ರದ ಶಾಸಕರಾಗಿರುವ ಅಹ್ವಾದ್  ಅವರಿಗೆ ಮೇ ತಿಂಗಳಲ್ಲಿ ಕೊರೋನಾ ಸೋಂಕು ತಗುಲಿತ್ತು. ಅದಾದ ನಂತರ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು.

ಕೊರೋನಾ ವಿರುದ್ಧ ಹೋರಾಡಿ ಚೇತರಿಸಿಕೊಂಡ 2 ತಿಂಗಳ ನಂತರ ತಮ್ಮ ಪ್ಲಾಸ್ಮಾವನ್ನು ಸರ್ಕಾರಿ ಆಸ್ಪತ್ರೆಗೆ ದಾನ ಮಾಡುವುದಾಗಿ ಟ್ವೀಟ್ ಮಾಡಿದ್ದಾರೆ. ಮುಂದಿನ 2 ದಿನಗಳಲ್ಲಿ ಪ್ಲಾಸ್ಮಾ ದಾನ ಮಾಡುವುದಾಗಿ ತಿಳಿಸಿದ್ದಾರೆ. ಕೊರೋನಾ ರೋಗಿಗಳ ಚಿಕಿತ್ಸೆಗಾಗಿ ಪ್ಲಾಸ್ಮಾ ಥೆರೆಪಿ ಮಾಡಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com