ತಿಂಗಳ ಬಳಿಕ ಕರ್ತವ್ಯಕ್ಕೆ ಹಾಜರಾದ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್

ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೊರೊನಾ ಸೋಂಕಿನಿಂದ ಪೂರ್ಣ ಗುಣಮುಖರಾಗಿದ್ದು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 
ಸತ್ಯೇಂದರ್ ಜೈನ್
ಸತ್ಯೇಂದರ್ ಜೈನ್
Updated on

ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೊರೊನಾ ಸೋಂಕಿನಿಂದ ಪೂರ್ಣ ಗುಣಮುಖರಾಗಿದ್ದು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗುತ್ತಿದ್ದ ಸಮಯದಲ್ಲಿ ನಿರಂತರ ಕೆಲಸದಲ್ಲಿ ತೊಡಗಿದ್ದ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದರು. ಆರೋಗ್ಯಾಧಿಕಾರಿಗಳು ಮತ್ತು ವೈದ್ಯರ ಜೊತೆಗೆ ಕಾಲಕಾಲಕ್ಕೆ ಸಭೆಗಳನ್ನು ನಡೆಸುತ್ತಿದ್ದರು.

ಕೊವಿಡ್ ಕೇರ್ ಸೆಂಟರ್ ಗಳಿಗೂ ಭೇಟಿ ನೀಡಿದ್ದ ಸತ್ಯೇಂದರ್ ಜೈನ್, ಸೋಂಕಿತರಿಗೆ ನೀಡುತ್ತಿದ್ದ ಚಿಕಿತ್ಸಾ ವಿಧಾನದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಆರೋಗ್ಯ ಸಚಿವರಿಗೆ ಕೊರೊನಾ ಸೋಂಕು ತಗಲಿತ್ತು. ಆರೋಗ್ಯದಲ್ಲಿ ಚೇತರಿಸಿಕೊಂಡ ನಂತರ ಕರ್ತವ್ಯಕ್ಕೆ ಹಾಜರಾಗುತ್ತಿರುವ ಸಚಿವರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವಿಟರ್ ನಲ್ಲಿ ಸ್ವಾಗತ ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com