ರಾಮ ಮಂದಿರ ಭೂಮಿ ಪೂಜೆಗೂ ಮುನ್ನ ಅಡ್ವಾಣಿ ವಿರುದ್ಧದ ಬಾಬ್ರಿ ಮಸೀದಿ ಪ್ರಕರಣ ಇತ್ಯರ್ಥಗೊಳಿಸಿ: ಸ್ವಾಮಿ

ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೂ ಮುನ್ನ ಬಿಜೆಪಿ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ಅವರ ವಿರುದ್ಧ ಇರುವ ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಕೈಬಿಡಬೇಕು ಎಂದು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. 
ಸುಬ್ರಮಣಿಯನ್ ಸ್ವಾಮಿ
ಸುಬ್ರಮಣಿಯನ್ ಸ್ವಾಮಿ
Updated on

ನವದೆಹಲಿ: ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೂ ಮುನ್ನ ಬಿಜೆಪಿ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ಅವರ ವಿರುದ್ಧ ಇರುವ ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಕೈಬಿಡಬೇಕು ಎಂದು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿರುವ ಸುಬ್ರಹ್ಮಣಿಯನ್ ಸ್ವಾಮಿ, ಒಂದು ವೇಳೆ ಅಡ್ವಾಣಿ, ಜೋಷಿ ಅವರು ಅಯೋಧ್ಯೆಯಲ್ಲಿನ ಕಟ್ಟಡವನ್ನು ಧ್ವಂಸಗೊಳಿಸಿದ್ದರೂ ಅವರು ಮಸೀದಿಯನ್ನು ಧ್ವಂಸಗೊಳಿಸಿಲ್ಲ, ಬದಲಾಗಿ ದೇವಾಲಯವನ್ನು ಪುನರ್ ನಿರ್ಮಾಣಕ್ಕಾಗಿ ಉರುಳಿಸಿದ್ದಾರೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಟ್ವೀಟ್ ನಲ್ಲಿ ಹೇಳಿದ್ದಾರೆ.

ಪ್ರಧಾನಿ ಅಯೋಧ್ಯೆಗೆ ಮಂದಿರ ಭೂಮಿ ಪೂಜೆಗೆ ತೆರಳುವುದಕ್ಕೂ ಮುನ್ನ ಅಡ್ವಾಣಿ, ಜೋಷಿ ಅವರ ವಿರುದ್ಧದ ಬಾಬ್ರಿ ಮಸೀದಿ ಧ್ವಂಸ ಎಂಬ ಕ್ಷುಲ್ಲಕ  ಪ್ರಕರಣವನ್ನು ಕೈಬಿಡಬೇಕು ಎಂದು ಸ್ವಾಮಿ ಆಗ್ರಹಿಸಿದ್ದಾರೆ. ಆ.05 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿಂದಂತೆ 250 ಗಣ್ಯರು ಭಾಗಿಯಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com