ರಾಮಮಂದಿರ ನಿರ್ಮಾಣ ಶಿಲಾನ್ಯಾಸ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಶಿಲಾನ್ಯಾಸ(ಭೂಮಿ ಪೂಜೆ)ವನ್ನು ತಡೆಯುವಂತೆ ಕೋರಿ ಸಲ್ಲಿಸಿಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ರಾಮಮಂದಿರ
ರಾಮಮಂದಿರ
Updated on

ಲಖನೌ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಶಿಲಾನ್ಯಾಸ(ಭೂಮಿ ಪೂಜೆ)ವನ್ನು ತಡೆಯುವಂತೆ ಕೋರಿ ಸಲ್ಲಿಸಿಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿರುವ ಈ ಕಾರ್ಯಕ್ರಮವು ಆಗಸ್ಟ್ 5 ರಂದು ನಡೆಯಲಿದ್ದು ಇದನ್ನು ತಡೆಯುವಂತೆ ಮುಂಬೈ ಮೂಲದ ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ ಅವರು ಪಿಐಎಲ್ ಸಲ್ಲಿಸಿದ್ದರು. 

'ಭೂಮಿ ಪೂಜೆ' ಕೇಂದ್ರ ಸರ್ಕಾರ ಸೂಚಿಸಿರುವ ಕೋವಿಡ್ -19 ಪ್ರೋಟೋಕಾಲ್ ಉಲ್ಲಂಘನೆಯಾಗಿದೆ ಎಂದು ಸಾಕೇತ್ ಗೋಖಲೆ ಅವರು ತಮ್ಮ ಅರ್ಜಿನಲ್ಲಿ ನಮೂದಿಸಿದ್ದಾರೆ. 

ಕೋವಿಡ್ -19 ವಿರುದ್ಧದ ಹೋರಾಟದ ಮಾರ್ಗಸೂಚಿಯಂತೆ 'ಸಾಮಾಜಿಕ ಅಂತರ ಕಾಯ್ದೆಕೊಳ್ಳಬೇಕಿದೆ. ಆದರೆ ಆಗಸ್ಟ್ 5ರಂದು ಒಂದೇ ಸ್ಥಳದಲ್ಲಿ ಸುಮಾರು ಮುನ್ನೂರು ಜನರನ್ನು ಆಹ್ವಾನಿಸಲಾಗಿದೆ. ಈ ಮೂಲಕ ಕೇಂದ್ರ ಮತ್ತು ಉತ್ತರಪ್ರದೇಶ ಸರ್ಕಾರವು ಈ ಮಾರ್ಗಸೂಚಿಯನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಹೇಳಿದ್ದಾರೆ. 

ಸಾರ್ವಜನಿಕ ಸಭೆಯನ್ನು ಆಕರ್ಷಿಸುವ ಇಂತಹ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಅನುಮತಿಸಬಾರದು ಎಂದು ಅರ್ಜಿದಾರರು ಹೇಳಿದ್ದರು.

ಈ ಅರ್ಜಿ ಸಂಬಂಧ ಹೈಕೋರ್ಟ್, ಸಂಘಟಕರು ಮತ್ತು ಉತ್ತರ ಪ್ರದೇಶದ ಸರ್ಕಾರವು ಸಾಮಾಜಿಕ ಮತ್ತು ದೈಹಿಕ ದೂರಕ್ಕೆ ಅನ್ವಯವಾಗುವ ಎಲ್ಲಾ ಪ್ರೋಟೋಕಾಲ್ ಗಳನ್ನು ಅನುಸರಿಸುತ್ತವೆ ಎಂದು ನಾವು ನಿರೀಕ್ಷಿಸುತ್ತೇವೆ. ಹೀಗಾಗಿ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ನಮಗೆ ಯಾವುದೇ ಕಾರಣವಿಲ್ಲ ಆದ್ದರಿಂದ ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com