ನವದೆಹಲಿ: ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ವಿರುದ್ಧದ 11 ವರ್ಷ ಹಿಂದಿನ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 4ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದ್ದು, ಮುಂದಿನ ವಿಚಾರಣೆ ವೇಳೆ ವಾದ ಮಂಡಿಸಲು ಸಿದ್ಧರಾಗಿರುವಂತೆ ವಕೀಲರಿಗೆ ಸೂಚಿಸಿದೆ.
2009ರಲ್ಲಿ ತೆಹಲ್ಕಾ ನಿಯತಕಾಲಿಕೆಗೆ ಸಂದರ್ಶನ ನೀಡಿದ್ದ ಭೂಷಣ್ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಹೇಳಿಕೆ ನೀಡಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿದೆ.
Advertisement