ಗುಜರಾತ್: ರಾಜ್ಯಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಇಬ್ಬರು ಕೈ ಶಾಸಕರ ರಾಜೀನಾಮೆ

ಜೂನ್ 19 ರ ರಾಜ್ಯಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಗುಜರಾತ್ ಕಾಂಗ್ರೆಸ್ ನಲ್ಲಿ ಬೇಗುದಿ ಪ್ರಾರಂಬವಾಗಿದೆ. ಚುನಾವಣೆಗೆ ಮುನ್ನ ಇಬ್ಬರು ಗುಜರಾತ್ ಕಾಂಗ್ರೆಸ್ ಶಾಸಕರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. 
ಕಾಂಗ್ರೆಸ್
ಕಾಂಗ್ರೆಸ್
Updated on

ಅಹಮದಾಬಾದ್: ಜೂನ್ 19 ರ ರಾಜ್ಯಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಗುಜರಾತ್ ಕಾಂಗ್ರೆಸ್ ನಲ್ಲಿ ಬೇಗುದಿ ಪ್ರಾರಂಬವಾಗಿದೆ. ಚುನಾವಣೆಗೆ ಮುನ್ನ ಇಬ್ಬರು ಗುಜರಾತ್ ಕಾಂಗ್ರೆಸ್ ಶಾಸಕರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. 

ಕಾಂಗ್ರೆಸ್ ಶಾಸಕರಾದ ಅಕ್ಷಯ್ ಪಟೇಲ್ ಮತ್ತು ಜಿತು ಚೌಧರಿ ಗುಜರಾತ್ ವಿಧಾನಸಭಾ ಸ್ಪೀಕರ್ ರಾಜೇಂದ್ರ ತ್ರಿವೇದಿ ಅವರನ್ನು ಭೇಟಿಯಾಗಿ  ರಾಜೀನಾಮೆ ಪತ್ರ ಹಸ್ತಾಂತರಿಸಿದ್ದಾರೆ.

"ನಾನು ಅವರ ರಾಜೀನಾಮೆ ಅಂಗೀಕರಿಸಿದ್ದೇನೆ. ಅವರೀಗ ಶಾಸಕರಾಗಿ ಮುಂದುವರಿದಿಲ್ಲ"ತ್ರಿವೇದಿ ಗಾಂಧಿನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಪಟೇಲ್ ವಡೋದರಾದ ಕರ್ಜನ್ ಸ್ಥಾನವನ್ನು ಪ್ರತಿನಿಧಿಸಿದರೆ, ಚೌಧರಿ ವಲ್ಸಾದ್‌ನ ಕಪ್ರದ ಸ್ಥಾನದಿಂದ ಗೆದ್ದಿದ್ದರು.

ಇನ್ನು ಇದಕ್ಕೂ ಮೊದಲು ಮಾರ್ಚ್‌ನಲ್ಲಿಯೂ ಕಾಂಗ್ರೆಸ್ಸಿನ ಐವರು ಶಾಸಕರು ರಾಜೀನಾಮೆ ನೀಡಿದ್ದರು. 182 ಸದಸ್ಯರ ರಾಜ್ಯ ವಿಧಾನಸಭೆಯಲ್ಲಿ ಆಡಳಿತಾರೂಢ ಬಿಜೆಪಿ 103 ಶಾಸಕರು ಮತ್ತು ವಿರೋಧ ಪಕ್ಷ ಕಾಂಂಗ್ರೆಸ್ ಪ್ರಸ್ತುತ 66 ಶಾಸಕರನ್ನು ಹೊಂದಿದೆ. ಗುಜರಾತಿನಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು  ಬಿಜೆಪಿಯಿಂದ ಮೂವರು ಮತ್ತು ಕಾಂಗ್ರೆಸ್ ನಿಂದ ಇಬ್ಬರು ಅಭ್ಯರ್ಥಿಗಳು  ಕಣದಲ್ಲಿದ್ದಾರೆ. 

ಅಭಯ್ ಭಾರದ್ವಾಜ್, ರಮಿಲಾ ಬಾರಾ ಮತ್ತು ನರ್ಹಾರಿ ಅಮೀನ್ ಅವರನ್ನು ಬಿಜೆಪಿ ಕಣಕ್ಕಿಳಿಸಿದರೆ, ಕಾಂಗ್ರೆಸ್ ಹಿರಿಯ ನಾಯಕರಾದ ಶಕ್ತಿಸಿಂಹ್  ಗೋಹಿಲ್ ಮತ್ತು ಭರತ್ ಸಿಂಹ್ ಸೋಲಂಕಿ ಅವರನ್ನು ಚುನಾವಣೆಗೆ ಕಣಕ್ಕಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com