ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆ ಬಳಿ ಶಂಕಿತ ಸ್ಥಿತಿಯಲ್ಲಿ ಭಾರತೀಯ ಯೋಧನ ಶವ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯೋಧನ ಶವ ಪತ್ತೆಯಾಗಿದ್ದು ಹಲವು ಅನುಮಾನಗಳನ್ನು ಮೂಡಿಸಿದೆ. ಇನ್ನು ಭಾರತೀಯ ಸೇನೆ ಈ ಕುರಿತಂತೆ ಮಾಹಿತಿ ಕಲೆ ಹಾಕುತ್ತಿದೆ.
ಭಯೋತ್ಪಾದಕರು ಭಾರತೀಯ ಯೋಧನನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂಬ ಶಂಕೆ ಮೂಡಿದೆ.
Advertisement