ಕೇಂದ್ರದ ಮಾಜಿ ಸಚಿವ ಅರ್ಜುನ್ ಚರಣ್ ಸೇಥಿ ನಿಧನ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಅರ್ಜುನ್ ಚರಣ್ ಸೇಥಿ ಸೋಮವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅರ್ಜುನ್ ಸೇಥಿ
ಅರ್ಜುನ್ ಸೇಥಿ
Updated on

ಭುವನೇಶ್ವರ್: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಅರ್ಜುನ್ ಚರಣ್ ಸೇಥಿ ಸೋಮವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

79 ವರ್ಷದ ಸೇಥಿ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದರು. ಭದ್ರಾಕ್ ಲೋಕಸಭಾ ಕ್ಷೇತ್ರದಿಂದ 8 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.2000-2004 ರವರೆಗೆ ಅಟಲ್ ಬಿಹಾರಿ ವಾಜಪೇಯಿ ಅವರ ಎನ್ ಡಿ ಎ ಸರ್ಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದರು.

ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಸೇಥಿ ಮೃದು ಮಾತಿನ ವ್ಯಕ್ತಿತ್ವ ಉಳ್ಳವರಾಗಿದ್ದರು. 2 ಬಾರಿ ಒಡಿಶಾ ವಿಧಾನಸಭೆಗೂ ಆಯ್ಕೆಯಾಗಿದ್ದರು. ಇನ್ನೂ ಹಿರಿಯ ನಾಯಕನ ನಿಧನಕ್ಕೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com