ದೇಶದಲ್ಲಿ ಕೊರೋನಾ ಸಮುದಾಯ ಪ್ರಸರಣ ಹಂತಕ್ಕೆ ತಲುಪಿಲ್ಲ: ಕೇಂದ್ರ ಸರ್ಕಾರ

ಭಾರತದಲ್ಲಿ ಕೊರೋನಾ ವೈರಸ್ ಸಮುದಾಯ ಪ್ರಸರಣ ಹಂತಕ್ಕೆ ತಲುಪಿಲ್ಲ ಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಸಮುದಾಯ ಪ್ರಸರಣ ಹಂತಕ್ಕೆ ತಲುಪಿಲ್ಲ ಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಪ್ರಧಾನ ನಿರ್ದೇಶಕ ಬಲರಾಮ್‌ ಭಾರ್ಗವ್ ಅವರು, ದೆಹಲಿ ಮತ್ತು ಮುಂಬೈನಲ್ಲಿ ಕೆಲ ದಿನಗಳಿಂದ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಆದರೆ ದೇಶದಲ್ಲಿ ಕೊರೋನಾ ಸೋಂಕು ಸಮುದಾಯ ಹಂತಕ್ಕೆ ತಲುಪಿಲ್ಲ. ಇದರ ಸುತ್ತ ಕಾವೇರಿದ ಚರ್ಚೆ ನಡೆಯುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಇದನ್ನು ವ್ಯಾಖ್ಯಾನಿಸಿಲ್ಲ. ಸೋಂಕು ಹರಡುವಿಕೆ ನಮ್ಮ ದೇಶದಲ್ಲಿ ತುಂಬಾ ಕಡಿಮೆ, ಶೇ. 1ಕ್ಕಿಂತ ಕಡಿಮೆ ಇದೆ. ನಗರ ಪ್ರದೇಶಗಳಲ್ಲಿ ಇದು ಸ್ವಲ್ಪ ಹೆಚ್ಚು ಹಾಗೂ ಕಂಟೈನ್‌ಮೆಂಟ್‌ ಝೋನ್‌ಗಳಲ್ಲಿ ಸ್ವಲ್ಪ ಹೆಚ್ಚಾಗಿದೆ. ಖಂಡಿತವಾಗಿಯೂ ನಾವು ಸಮುದಾಯ ಪ್ರಸರಣ ಹಂತದಲ್ಲಿ ಇಲ್ಲ ಎಂದು ಹೇಳಿದ್ದಾರೆ.

ತಜ್ಞರ ಪ್ರಕಾರ ಸೋಂಕು ಪ್ರಕರಣಗಳ ಮೂಲ ಪತ್ತೆಯಾಗದೇ ಇರುವ ಪ್ರಕರಣಗಳು ಹೆಚ್ಚಾದಾಗ ಅದನ್ನು ಸಮುದಾಯ ಪ್ರಸರಣ ಅಥವಾ ಮೂರನೇ ಹಂತ ಎನ್ನಲಾಗುತ್ತದೆ.  ಕರ್ನಾಟಕವೂ ಸೇರಿ ದೇಶದೆಲ್ಲೆಡೆ ಈ ರೀತಿಯ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಮುಂಬೈ ಮತ್ತು ದೆಹಲಿಯಲ್ಲಿ ಈ ಪ್ರಮಾಣ ವಿಪರೀತ ಏರಿಕೆಯಾಗಿದೆ. ಸೋಮವಾರ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಹೆಚ್ಚಿನ ಪ್ರಮಾಣದ ಪ್ರಕರಣಗಳಲ್ಲಿ ಸೋಂಕಿನ ಮೂಲ ಪತ್ತೆಯಾಗುತ್ತಿಲ್ಲ. ಆದರೆ ಕೇಂದ್ರ ಸರ್ಕಾರ ಮಾತ್ರ ಸಮುದಾಯ ಪ್ರಸರಣದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದರು.  ಸತ್ಯೇಂದ್ರ ಜೈನ್‌ ಪ್ರಕಾರ ದೆಹಲಿಯ ಶೇ.50 ರಷ್ಟು ಪ್ರಕರಣಗಳಲ್ಲಿ ಸೋಂಕಿನ ಮೂಲ ತಿಳಿದು ಬರುತ್ತಿಲ್ಲ. 'ದೆಹಲಿಯಲ್ಲಿ ಸಮುದಾಯ ಪ್ರಸರಣ ಆರಂಭವಾಗಿದೆ. ಆದರೆ ಇದನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಎಂದು ಏಮ್ಸ್‌ ನಿರ್ದೇಶಕ ರಣದೀಪ್‌ ಗುಲೇರಿಯಾ ಹೇಳಿದ್ದಾರೆ ಎಂಬುದಾಗಿ ಜೈನ್ ಪ್ರತಿಪಾದಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com