ಗಾಲ್ವಾನ್ ಕಣಿವೆ: ಭಾರತ-ಚೀನಾ ನಡುವೆ ಸಂಘರ್ಷ; 3 ಭಾರತೀಯ ಯೋಧರು ಹುತಾತ್ಮ

ಪೂರ್ವ ಲಡಾಕ್ ನಲ್ಲಿ ಸೇನೆ ಜಮಾವಣೆ ಮಾಡಿ ಭಾರತಕ್ಕೆ ಉಪಟಳ ನೀಡುತ್ತಿರುವ ಚೀನಾದ ಸೈನಿಕರು ನಿನ್ನೆ ರಾತ್ರಿ ಕರ್ನಲ್ ಸೇರಿದಂತೆ ಮೂವರು ಭಾರತೀಯ ಯೋಧರನ್ನು ಹತ್ಯೆಗೈದಿದ್ದಾರೆ. 
ಭಾರತೀಯ ಸೇನೆ
ಭಾರತೀಯ ಸೇನೆ
Updated on

ಲಡಾಖ್: ಪೂರ್ವ ಲಡಾಕ್ ನಲ್ಲಿ ಸೇನೆ ಜಮಾವಣೆ ಮಾಡಿ ಭಾರತಕ್ಕೆ ಉಪಟಳ ನೀಡುತ್ತಿರುವ ಚೀನಾದ ಸೈನಿಕರು ನಿನ್ನೆ ರಾತ್ರಿ ಕರ್ನಲ್ ಸೇರಿದಂತೆ ಮೂವರು ಭಾರತೀಯ ಯೋಧರನ್ನು ಹತ್ಯೆಗೈದಿದ್ದಾರೆ. 

ಭಾರತ-ಚೀನಾ ನಡುವಿನ ಯೋಧರ ಸಂಘರ್ಷದಲ್ಲಿ ಕರ್ನಲ್ ಸೇರಿದಂತೆ ಮೂವರು ಯೋಧರು ಹುತಾತ್ಮರಾಗಿದ್ದಾರೆ. 

ಭಾರತ ಗಡಿಗೆ ಚೀನಾ ಸೈನಿಕರು ಅತಿಕ್ರಮ ಪ್ರವೇಶ ಮಾಡಿದ್ದರು. ಇದರಿಂದಾಗಿ ಕಳೆದ ರಾತ್ರಿ ಭಾರತೀಯ ಯೋಧರು ಚೀನಾ ಸೈನಿಕರನ್ನು ನಿಯಂತ್ರಿಸಲು ಮುಂದಾಗಿದ್ದರು. ಈ ವೇಳೆ ನೂಕಾಟ, ತಳ್ಳಾಟ ನಡೆದಿತ್ತು. 

ಅತಿಕ್ರಮ ಪ್ರದೇಶದಿಂದ ಹಿಂದೆ ಸರಿಯುವಂತೆ ಚೀನಾ ಸೈನಿಕರಿಗೆ ಭಾರತೀಯ ಯೋಧರು ಎಚ್ಚರಿಕೆ ನೀಡಿದ್ದರು. ಆದರೆ ಇದಕ್ಕೆ ಚೀನಾ ಸೈನಿಕರು ಸೊಪ್ಪು ಹಾಕಲಿಲ್ಲ. ಇದರಿಂದಾಗಿ ಉಭಯ ಸೈನಿಕರ ನಡುವೆ ಸಂಘರ್ಷ ಶುರುವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com