ಲಡಾಖ್: ಪೂರ್ವ ಲಡಾಕ್ ನಲ್ಲಿ ಸೇನೆ ಜಮಾವಣೆ ಮಾಡಿ ಭಾರತಕ್ಕೆ ಉಪಟಳ ನೀಡುತ್ತಿರುವ ಚೀನಾದ ಸೈನಿಕರು ನಿನ್ನೆ ರಾತ್ರಿ ಕರ್ನಲ್ ಸೇರಿದಂತೆ ಮೂವರು ಭಾರತೀಯ ಯೋಧರನ್ನು ಹತ್ಯೆಗೈದಿದ್ದಾರೆ.
ಭಾರತ-ಚೀನಾ ನಡುವಿನ ಯೋಧರ ಸಂಘರ್ಷದಲ್ಲಿ ಕರ್ನಲ್ ಸೇರಿದಂತೆ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಭಾರತ ಗಡಿಗೆ ಚೀನಾ ಸೈನಿಕರು ಅತಿಕ್ರಮ ಪ್ರವೇಶ ಮಾಡಿದ್ದರು. ಇದರಿಂದಾಗಿ ಕಳೆದ ರಾತ್ರಿ ಭಾರತೀಯ ಯೋಧರು ಚೀನಾ ಸೈನಿಕರನ್ನು ನಿಯಂತ್ರಿಸಲು ಮುಂದಾಗಿದ್ದರು. ಈ ವೇಳೆ ನೂಕಾಟ, ತಳ್ಳಾಟ ನಡೆದಿತ್ತು.
ಅತಿಕ್ರಮ ಪ್ರದೇಶದಿಂದ ಹಿಂದೆ ಸರಿಯುವಂತೆ ಚೀನಾ ಸೈನಿಕರಿಗೆ ಭಾರತೀಯ ಯೋಧರು ಎಚ್ಚರಿಕೆ ನೀಡಿದ್ದರು. ಆದರೆ ಇದಕ್ಕೆ ಚೀನಾ ಸೈನಿಕರು ಸೊಪ್ಪು ಹಾಕಲಿಲ್ಲ. ಇದರಿಂದಾಗಿ ಉಭಯ ಸೈನಿಕರ ನಡುವೆ ಸಂಘರ್ಷ ಶುರುವಾಗಿತ್ತು.
Advertisement