ನವದೆಹಲಿ: ಪೂರ್ವ ಲಡಾಖ್ ನಲ್ಲಿ ಕಳೆದ ರಾತ್ರಿ ನಡೆದ ಚೀನಾ ಮತ್ತು ಭಾರತೀಯ ಯೋಧರ ಸಂಘರ್ಷದಲ್ಲಿ ಮೂವರು ಭಾರತೀಯ ಯೋಧರು ಮೃತಪಟ್ಟಿದ್ದು ಈ ಸಂಬಂಧ ಭಾರತೀಯ ಸೇನೆ ದಿಢೀರ್ ತುರ್ತು ಸುದ್ಧಿಗೋಷ್ಠಿ ಕರೆದಿದೆ.
ಗಾಲ್ವಾನ್ ಕಣಿವೆಯಲ್ಲಿ ಕಳೆದ ರಾತ್ರಿ ಚೀನಾ ಸೈನಿಕರು ಅತಿಕ್ರಮ ಪ್ರವೇಶ ಮಾಡಿದ್ದರು. ಈ ವೇಳೆ ಭಾರತೀಯ ಸೇನೆ ಹಿಂದೆ ಸರಿಯುವಂತೆ ಎಚ್ಚರಿಕೆ ನೀಡಿದ್ದರು. ಆದರೆ ಚೀನಾ ಸೈನಿಕರು ಹಿಂದೆ ಸರಿಯದಿದ್ದರಿಂದ ಉಭಯ ಸೇನೆಯ ನಡುವೆ ಸಂಘರ್ಷ ನಡೆದಿತ್ತು.
ಚೀನಾ ಮತ್ತು ಭಾರತೀಯ ಯೋಧರು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಓರ್ವ ಕರ್ನಲ್, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಗಡಿಯಲ್ಲಿ ಪರಿಸ್ಥಿತಿ ಉಲ್ಭಣಗೊಳ್ಳುತ್ತಿದ್ದಂತೆ ಭಾರತೀಯ ಸೇನೆ ತುರ್ತು ಸುದ್ದಿಗೋಷ್ಠಿ ಕರೆದಿದೆ.
Advertisement