ಒಪ್ಪಂದಗಳಿಗೆ ಬದ್ಧರಾಗಿರಲು ಶಸ್ತ್ರಾಸ್ತ್ರ ಇದ್ದರೂ ಚೀನಿಯರ ವಿರುದ್ಧ ಪ್ರಯೋಗಿಸದೇ ಪ್ರಾಣತ್ಯಾಗ ಮಾಡಿದ ಭಾರತೀಯ ಯೋಧರು  

ಲಡಾಖ್ ನ ಗಲ್ವಾನ್ ಕಣಿವೆಯಲ್ಲಿ ಚೀನಾ ಯೋಧರ ಜೊತೆ ಸಂಘರ್ಷ ನಡೆದಾಗಲೂ ಸಹ ಭಾರತೀಯ ಯೋಧರು ಒಪ್ಪಂದಗಳನ್ನು ಮುರಿಯದೇ ಅವುಗಳಿಗೆ ಬದ್ಧರಾಗಿರಲು ತಮ್ಮ ಜೀವವನ್ನೇ ಅರ್ಪಿಸಿದ್ದಾರೆ. 
ಭಾರತ-ಚೀನಾ ಗಡಿಭಾಗ
ಭಾರತ-ಚೀನಾ ಗಡಿಭಾಗ
Updated on

ಲಡಾಖ್: ಲಡಾಖ್ ನ ಗಲ್ವಾನ್ ಕಣಿವೆಯಲ್ಲಿ ಚೀನಾ ಯೋಧರ ಜೊತೆ ಸಂಘರ್ಷ ನಡೆದಾಗಲೂ ಸಹ ಭಾರತೀಯ ಯೋಧರು ಒಪ್ಪಂದಗಳನ್ನು ಮುರಿಯದೇ ಅವುಗಳಿಗೆ ಬದ್ಧರಾಗಿರಲು ತಮ್ಮ ಜೀವವನ್ನೇ ಅರ್ಪಿಸಿದ್ದಾರೆ. 

ಚೀನಾ ಯೋಧರು ಕಬ್ಬಿಣದ ರಾಡ್ ಗಳು, ಮೊಳೆಗಳಿಂದಲೇ ತುಂಬಿದ್ದ ಬಡಿಗೆಗಳನ್ನು ತಂದು ಅವುಗಳಿಂದ ಭಾರತೀಯ ಯೋಧರ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಈ ಘರ್ಷಣೆಯಲ್ಲಿ 20 ಯೋಧರು ಸಾವನ್ನಪ್ಪಿದ್ದಾರೆ. 
ಚೀನಾ-ಭಾರತದ ನಡುವಿನ ಸಂಘರ್ಷದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್, ಗಲ್ವಾನ್ ಕಣಿವೆಯಲ್ಲಿದ್ದ ಭಾರತೀಯ ಯೋಧರ ಬಳಿ ಶಸ್ತ್ರಾಸ್ತ್ರಗಳಿದ್ದವು ಎಂದು ಎಂದು ಹೇಳಿದ್ದಾರೆ. ಗಡಿಯಲ್ಲಿ ನಿಯೋಜನೆಗೊಂಡ ಯೋಧರ ಕೈಲಿ ಶಸ್ತ್ರಾಸ್ತ್ರಗಳಿರುತ್ತವೆ ಎಂದು ತಿಳಿಸಿದ್ದಾರೆ.

ಆದರೆ 1996-2005 ರಲ್ಲಿ ಭಾರತ-ಚೀನಾ ನಡುವೆ ನಡೆದ ಒಪ್ಪಂದಗಳ ಪೈಕಿ ಉಭಯ ಪಕ್ಷದ ಸೈನಿಕರು ಮುಖಾಮುಖಿಯಾದಾಗ ಫೈರ್ ಆರ್ಮ್ಸ್ ನ್ನು ಬಳಕೆ ಮಾಡುವಂತಿಲ್ಲ ಎಂಬ ನಿಯಮವಿದೆ. ಜೂ.15 ರಂದು ಭಾರತ-ಚೀನಾ ಯೋಧರ ನಡುವೆ ಸಂಘರ್ಷವೇರ್ಪಟ್ಟಾಗ ಈ ನಿಯಮಗಳನ್ನು ಉಲ್ಲಂಘನೆ ಮಾಡದೇ ಭಾರತೀಯ ಯೋಧರು ಚೀನಿಯರೊಂದಿಗೆ ಹೋರಾಡಿ ತಮ್ಮ ಜೀವವನ್ನೇ ತ್ಯಾಗ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com