ನವದೆಹಲಿ: ಪೂರ್ವ ಲಡಾಕ್ನಲ್ಲಿನ ಗಡಿ ಬಿಕ್ಕಟ್ಟು ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಮೂರೂ ಪಡೆಗಳ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಲಡಾಖ್ನಲ್ಲಿನ ವಾಸ್ತವ ಪರಿಸ್ಥಿತಿ ಹಾಗೂ ಗಡಿನಿಯಂತ್ರಣಾ ರೇಖೆಯುದ್ದಕ್ಕೂ ಸನ್ನದ್ಧತೆಯ ಬಗ್ಗೆ ಸಚಿವರು ಮಾಹಿತಿ ಪಡೆದಿದ್ದಾರೆ. ಭೂಗಡಿ, ವೈಮಾನಿಕ ಪ್ರದೇಶ ಮತ್ತು ಸಾಗರ ರೇಖೆಗಳಲ್ಲಿ ಚೀನಾ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ ಇಡುವಂತೆ ಮೂರೂ ಪಡೆಗಳ ಮುಖ್ಯಸ್ಥರಿಗೆ ಸಚಿವರು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೂನ್ 15 ರಂದು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯೊಂದಿಗಿನ ಹಿಂಸಾತ್ಮಕ ಮುಖಾಮುಖಿಯಲ್ಲಿ ಕರ್ನಲ್ ಸೇರಿದಂತೆ 20 ಭಾರತೀಯ ಸೈನಿಕರು ಹತರಾಗಿದ್ದರು.
Advertisement