ದೆಹಲಿ ಹಿಂಸಾಚಾರ ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ: ಮಮತಾ ಬ್ಯಾನರ್ಜಿ

ದೆಹಲಿಯಲ್ಲಿ ನಡೆದ ಹಿಂಸಾಚಾರ ಸಂಬಂಧ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇದು ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Updated on

ಕೋಲ್ಕೋತಾ: ದೆಹಲಿಯಲ್ಲಿ ನಡೆದ ಹಿಂಸಾಚಾರ ಸಂಬಂಧ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇದು ಕೇಂದ್ರ ಸರ್ಕಾರ ಪ್ರಾಯೋಜಿತ ನರಮೇಧ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಶಾಹಿದ್ ಮಿನಾರ್ ಮೈದಾನದಲ್ಲಿ ಭಾನುವಾರ ನಡೆದ‌ ಅಮಿತ್ ಷಾ ಅವರ ಸಭೆಗೂ ಮುನ್ನ ಗೋಲಿ ಮಾರೊ ಘೋಷಣೆ ಕೂಗಿರುವುದನ್ನು ಖಂಡಿಸಿದ ಅವರು, ಗುಜರಾತ್ ಮಾದರಿಯ ನರಮೇಧವನ್ನು ಪುನಾರವರ್ತಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

‘ಕೋಲ್ಕತಾ ಬೀದಿಗಳಲ್ಲಿ ಗೋಲಿ ಮಾರೊ ಘೋಷಣೆ ಕೂಗಿರುವುದನ್ನ ನಾನು ಖಂಡಿಸುತ್ತೇನೆ. ಇದು ಬಂಗಾಳವೇ ಹೊರತು ದೆಹಲಿ ಅಲ್ಲ. ಇದನ್ನು ನಾವು ಸಹಿಸುವುದಿಲ್ಲ. ಇಲ್ಲಿನ ಕಾನೂನು ತನ್ನದೇ ಆದ ಕರ್ತವ್ಯ ನಿರ್ವಹಿಸಲಿದೆ’ ಎಂದು ಮಮತಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com