ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ನಿರ್ಭಯಾ ಹತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ನಾಳೆ ಪ್ರಕರಣದ ನಾಲ್ಕು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿ ಮಾಡುವಂತಿಲ್ಲ ಎಂದು ಹೇಳಿದೆ.
ಈ ಹಿಂದೆ ದೆಹಲಿ ಹೈಕೋರ್ಟ್ ಮಾರ್ಚ್ 3ಕ್ಕೆ ನಿರ್ಭಯಾ ಹತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ಆದೇಶ ನೀಡಿತ್ತು. ಅದರಂತೆ ನಾಳೆ ಎಲ್ಲ ನಾಲ್ಕೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಯಾಗಲಿದೆ ಎಂದೇ ಭಾವಿಸಲಾಗಿತ್ತು. ಆದರೆ ದೆಹಲಿ ಕೋರ್ಟ್ ಇದೀಗ ಗಲ್ಲು ಶಿಕ್ಷೆ ಜಾರಿಗೆ ತಡೆಯಾಜ್ಞೆ ನೀಡಿದೆ. ಅಲ್ಲದೆ ಈ ಹಿಂದೆ ಹೊರಡಿಸಿದ್ದ ಡೆತ್ ವಾರೆಂಟ್ ಗೆ ತಡೆಯಾಜ್ಞೆ ನೀಡಿದ್ದು ಹೊಸದಾಗಿ ಡೆತ್ ವಾರಂಟ್ ಜಾರಿ ಮಾಡುವಂತೆ ಸೂಚಿಸಿದೆ.
ದೆಹಲಿ ಖೈದಿಗಳ ನಿಯಮಾವಳಿಗಳ ಪ್ರಕಾರ ಗಲ್ಲು ಶಿಕ್ಷೆಗೆ ಗುರಿಯಾದ ಯಾವುದೇ ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕಾರಗೊಂಡರೆ ಅಪರಾಧಿಗೆ ಅಂದಿನಿಂದ 14 ದಿನಗಳ ಕಾಲ ಕಾಲಾವಕಾಶ ನೀಡಬೇಕು. ಇದೇ ಕಾರಣಕ್ಕೆ ನ್ಯಾಯಾಲಯ ಗಲ್ಲು ಶಿಕ್ಷೆ ಜಾರಿಯನ್ನು ತಡೆ ಹಿಡಿದಿದೆ ಎನ್ನಲಾಗುತ್ತಿದೆ.
ಅಲ್ಲದೆ ಅಪರಾಧಿ ಪವನ್ ಗುಪ್ತಾ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಕ್ಷಮಾದಾನ ಅರ್ಜಿಯ ಇತ್ಯರ್ಥವಾಗುವವರೆಗೂ ಗಲ್ಲು ಶಿಕ್ಷೆ ಜಾರಿಗೊಳಿಸಲು ಸಾಧ್ಯವಿಲ್ಲ ಎಂಬ ವಾದವೂ ಕೂಡ ಕೇಳಿಬರುತ್ತಿದೆ.
ನಿರ್ಭಯಾ: 'ಬೆಂಕಿಯೊಂದಿಗೆ ಸರಸ ಬೇಡ'; ಅಪರಾಧಿಗಳ ಪರ ವಕೀಲರಿಗೆ ದೆಹಲಿ ಕೋರ್ಟ್ ಛಾಟಿ
ನಿರ್ಭಯಾ ಪ್ರಕರಣ: ಕ್ಷಮಾದಾನ ಅರ್ಜಿ ವಜಾ, ನಾಳೆ ನಾಲ್ವರಿಗೂ ಗಲ್ಲು ಫಿಕ್ಸ್!
ನಿರ್ಭಯಾ ಪ್ರಕರಣ: ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ ಪವನ್ ಗುಪ್ತಾ
ನಿರ್ಭಯಾ ಹತ್ಯಾಚಾರಿಗಳಿಗೆ ನಾಳೆ ಗಲ್ಲು ಫಿಕ್ಸ್..?; ಶಿಕ್ಷೆಗೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ!
ಗಲ್ಲು ತಪ್ಪಿಸಿಕೊಳ್ಳುವ ಮತ್ತೊಂದು ಯತ್ನ ವಿಫಲ: ನಿರ್ಭಯಾ ಹತ್ಯಾಚಾರಿಯ ಮತ್ತೊಂದು ಅರ್ಜಿ 'ಸುಪ್ರೀಂ'ನಿಂದ ವಜಾ!
12 ವರ್ಷದ ಬಾಲಕಿ ಮೇಲೆ ಪೈಶಾಚಿಕ ಕೃತ್ಯ: ಅತ್ಯಾಚಾರ ಎಸಗಿ ಮರಕ್ಕೆ ನೇಣು ಹಾಕಿದ ಅಪ್ರಾಪ್ತರು
Advertisement