ಮುಂಬೈ: ಸಿಎಂ ಉದ್ಧವ್ ಠಾಕ್ರೆ ನಿವಾಸ ಬಳಿ ವಾಂಟೆಡ್ ಕ್ರಿಮಿನಲ್ ಬಂಧನ; ಪಿಸ್ತೂಲ್, ಮದ್ದುಗುಂಡು ವಶ 

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸದ ಬಳಿ ವಾಂಟೆಡ್ ಕ್ರಿಮಿನಲ್ ನ್ನು ಬಂಧಿಸಿ ಆತನಿಂದ ದೇಶಿ ನಿರ್ಮಿತ ಪಿಸ್ತೂಲ್, ಏಳು ಜೀವಂತ ಮದ್ದು ಗುಂಡುಗಳನ್ನು, ಸಿಡಿಮದ್ದುಗಳನ್ನು ಪೊಲೀಸರು ಮಂಗಳವಾರ ಬೆಳಗ್ಗೆ ವಶಪಡಿಸಿಕೊಂಡಿದ್ದಾರೆ.
ಮಹಾ ಸಿಎಂ ಉದ್ಧವ್ ಠಾಕ್ರೆ
ಮಹಾ ಸಿಎಂ ಉದ್ಧವ್ ಠಾಕ್ರೆ
Updated on

ಮುಂಬೈ:ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸದ ಬಳಿ ವಾಂಟೆಡ್ ಕ್ರಿಮಿನಲ್ ನ್ನು ಬಂಧಿಸಿ ಆತನಿಂದ ದೇಶಿ ನಿರ್ಮಿತ ಪಿಸ್ತೂಲ್, ಏಳು ಜೀವಂತ ಮದ್ದು ಗುಂಡುಗಳನ್ನು, ಸಿಡಿಮದ್ದುಗಳನ್ನು ಪೊಲೀಸರು ಮಂಗಳವಾರ ಬೆಳಗ್ಗೆ ವಶಪಡಿಸಿಕೊಂಡಿದ್ದಾರೆ.

ಮುಂಬೈಯ ಬಾಂದ್ರಾ ಪೂರ್ವದಲ್ಲಿರುವ ಉದ್ಧವ್ ಠಾಕ್ರೆ ನಿವಾಸದ ಹೊರಗೆ ಮುಂಬೈ ಅಪರಾಧ ವಿಭಾಗದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಆತನನ್ನು ಇರ್ಶಾದ್ ಖಾನ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮುಂಬೈ, ಥಾಣೆ ಮತ್ತು ಗುಜರಾತ್ ಗಳಲ್ಲಿ ಕಳ್ಳತನ, ದರೋಡೆ, ಕೊಲೆ ಪ್ರಕರಣಗಳು ದಾಖಲಾಗಿದೆ.

ಉದ್ಧವ್ ಠಾಕ್ರೆ ಅವರ ನಿವಾಸದ ಸುತ್ತಮುತ್ತ ತನ್ನ ಸಹಚರರ ಜೊತೆ ಸೇರಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಇರ್ಶಾದ್ ನ ಚಲನವಲನ ಬಗ್ಗೆ ನಿಖರ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಂಧಿಸಿದರು. ಆತನ ಬಳಿಯಿಂದ ಒಂದು ದೇಶಿ ನಿರ್ಮಿತ ರಿವಾಲ್ವರ್, ಏಳು ಜೀವಂತ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com