ದೆಹಲಿ ಹಿಂಸಾಚಾರ: ಸಂತ್ರಸ್ತರಿಗೆ ಆಪ್ ನೀಡಿದ ಪರಿಹಾರದಲ್ಲಿ ಯಾವುದೇ ದೋಷವಿಲ್ಲ; 'ಹೈ' ಆದೇಶ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ವೇಳೆ ಮೃತಪಟ್ಟವರಿಗೆ ಆಮ್ ಆದ್ಮಿ ಸರ್ಕಾರ ನೀಡಿರುವ ಪರಿಹಾರದಲ್ಲಿ ಯಾವುದೇ ತಪ್ಪಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದ್ದು, ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯನ್ನು ತಿರಸ್ಕರಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ವೇಳೆ ಮೃತಪಟ್ಟವರಿಗೆ ಆಮ್ ಆದ್ಮಿ ಸರ್ಕಾರ ನೀಡಿರುವ ಪರಿಹಾರದಲ್ಲಿ ಯಾವುದೇ ತಪ್ಪಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದ್ದು, ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯನ್ನು ತಿರಸ್ಕರಿಸಿದೆ. 

ದೆಹಲಿ ಹಿಂಸಾಚಾರದ ವೇಳೆ ಮೃತಪಟ್ಟವರಿಗೆ ಆಪ್ ಸರ್ಕಾರ ಪರಿಹಾರ ನೀಡಿತ್ತು. ಇದನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಅರ್ಜಿಯೊಂದು ದಾಖಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್ ಮತ್ತು  ನ್ಯಾಯಮೂರ್ತಿ ಸಿ ಹರಿ ಸಂಕರ್ ಅವರಿದ್ದ ಪೀಠ, ಇದೊಂದು ನೀತಿಯುತ ನಿರ್ಧಾರ. ಈ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದೆ. 

ಯಾವುದೇ ದೋಷವಿಲ್ಲದ ಆಧಾರದ ಮೇಲೆ ಪರಿಹಾರವನ್ನು ನೀಡಲಾಗಿದೆ. ಇದರಲ್ಲಿ ಯಾವುದೇ ದೋಷಗಳೂ ಇಲ್ಲ ಎಂದಿರುವ ನ್ಯಾಯಾಯಲಯ ಕೇವಲ ಗಲಭೆಯಲ್ಲಿ ಮೃತಪಟ್ಟ ಸಂತ್ರಸ್ತರಿಗೆ ಮಾತ್ರ ಪರಿಹಾರ ದೊರೆಯುವಂತೆ ಮಾಡಲು ದೆಹಲಿ ಸರ್ಕಾರಕ್ಕೆ ಸೂಚಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com