ಪಕ್ಷಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡುವ ಸಮಯವಿದು: ಅಜಯ್ ಮಕೇನ್ 

ಪಕ್ಷಕ್ಕೆ ತೀವ್ರ ಸಂಕಷ್ಟ ಎದುರಾಗಿದ್ದು ಈ ಪರೀಕ್ಷೆ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ನಿಂತು ಪಕ್ಷಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಅಜಯ್ ಮಕೇನ್ ಅಭಿಪ್ರಾಯಪಟ್ಟಿದ್ದಾರೆ.
ಅಜಯ್ ಮಕೇನ್
ಅಜಯ್ ಮಕೇನ್
Updated on

ನವದೆಹಲಿ: ಪಕ್ಷಕ್ಕೆ ತೀವ್ರ ಸಂಕಷ್ಟ ಎದುರಾಗಿದ್ದು ಈ ಪರೀಕ್ಷೆ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ನಿಂತು ಪಕ್ಷಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಅಜಯ್ ಮಕೇನ್ ಅಭಿಪ್ರಾಯಪಟ್ಟಿದ್ದಾರೆ.


ಒಂದು ಕಾಲದಲ್ಲಿ ರಾಹುಲ್ ಗಾಂಧಿಯವರ ಆಪ್ತ ಎಂದು ಗುರುತಿಸಿಕೊಂಡಿದ್ದ ಜ್ಯೋತಿರಾದಿತ್ಯ ಸಿಂದಿಯಾ ಅವರು ಬಿಜೆಪಿಗೆ ಸೇರಿದ ನಂತರ ಈ ಪ್ರತಿಕ್ರಿಯೆ ನೀಡಿದ್ದಾರೆ. ಜ್ಯೋತಿರಾದಿತ್ಯ ಸಿಂದಿಯಾ ಕಾಂಗ್ರೆಸ್ ಜೊತೆಗಿನ ತಮ್ಮ 18 ವರ್ಷಗಳ ಸಖ್ಯ ತೊರೆದಿದ್ದಾರೆ.


ಇಂದು ಕಾಂಗ್ರೆಸ್ ಗೆ ತೀವ್ರ ಕಷ್ಟದ ಪರಿಸ್ಥಿತಿ ಎದುರಾಗಿದೆ. ಕೆಲವು ಶಕ್ತಿಗಳು ದೇಶವನ್ನು ಒಂದಾಗಿ ಇರಿಸಲು ನೋಡುವ ಪಕ್ಷವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿವೆ. ಕಾಂಗ್ರೆಸ್ ನ ತತ್ವ, ಸಿದ್ದಾಂತಗಳನ್ನು ಪಾಲಿಸುವ ಜನರು ಈ ಅಗ್ನಿಪರೀಕ್ಷೆಯ ಸಂದರ್ಭದಲ್ಲಿ ಒಟ್ಟಾಗಿ ನಿಲ್ಲುವ ಸಮಯವಿದು ಎಂದು ಹೇಳಿಕೆಯಲ್ಲಿ ಮಕೇನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com