ದೆಹಲಿ ವಿಧಾನಸಭೆಯಲ್ಲಿ ಎನ್ ಪಿಆರ್ ವಿರುದ್ಧ ನಿರ್ಣಯ 

ದೆಹಲಿ ವಿಧಾನಸಭೆಯಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ವಿರುದ್ಧ ನಿರ್ಣಯ ಕೈಗೊಳ್ಳಲಾಗಿದೆ. 
ದೆಹಲಿ ವಿಧಾನಸಭೆಯಲ್ಲಿ ಎನ್ ಪಿಆರ್ ವಿರುದ್ಧ ನಿರ್ಣಯ
ದೆಹಲಿ ವಿಧಾನಸಭೆಯಲ್ಲಿ ಎನ್ ಪಿಆರ್ ವಿರುದ್ಧ ನಿರ್ಣಯ
Updated on

ನವದೆಹಲಿ: ದೆಹಲಿ ವಿಧಾನಸಭೆಯಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ವಿರುದ್ಧ ನಿರ್ಣಯ ಕೈಗೊಳ್ಳಲಾಗಿದೆ. ದೇಶದ ಪ್ರತಿಯೊಬ್ಬ ನಿವಾಸಿಯ ಗುರುತಿನ ಸಮಗ್ರ ಡಾಟಾ ಬೇಸ್ ನಿರ್ಮಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಎನ್ ಪಿಆರ್ ಯೋಜನೆಯನ್ನು ಜಾರಿಗೊಳಿಸುವುದಾಗಿ ಘೋಷಿಸಿದೆ. 

ಈ ಕುರಿತು ನಿರ್ಣಯ ಮಂಡಿಸಿರುವ ದೆಹಲಿಯ ಪರಿಸರ ಖಾತೆ ಸಚಿವ ಗೋಪಾಲ್ ರಾಯ್, ದೆಹಲಿಯಲ್ಲಿ ಕೇಂದ್ರ ಸರ್ಕಾರದ ಎನ್ ಪಿಆರ್ ನ್ನು ಜಾರಿಗೊಳಿಸಬಾರದು, ಒಂದು ವೇಳೆ ಜಾರಿಗೊಳಿಸಿದ್ದೇ ಆದಲ್ಲಿ 2010 ರ ಕಾರ್ಯವಿಧಾನವನ್ನು ಬಳಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. 

ಎನ್ ಸಿಆರ್ ಹಾಗೂ ಎನ್ ಪಿಆರ್ ಕೇವಲ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ, ಅದು ಬಹುಪಾಲು ಜನಸಂಖ್ಯೆಯ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ. ಈ ರೀತಿಯದ್ದು ಬ್ರಿಟೀಷ್ ಆಡಳಿತದಲ್ಲಿಯೂ ಜಾರಿಗೆ ಬಂದಿರಲಿಲ್ಲ. ಈ ಕಾಯ್ದೆಗಳು ಪ್ರತಿಯೊಬ್ಬ ನಾಗರಿಕನ ಪೌರತ್ವದ ಬಗ್ಗೆಯೂ ಪ್ರಶ್ನೆಗಳೇಳುವಂತೆ ಮಾಡಿದೆ ಎಂದು ಹೇಳಿದ್ದಾರೆ. 

ದೆಹಲಿಯಲ್ಲಿ ಕೊರೋನಾ ವೈರಸ್ ಪರಿಸ್ಥಿತಿ, ಎನ್ ಆರ್ ಸಿ-ಎನ್ ಪಿಆರ್ ಬಗ್ಗೆ ಚರ್ಚಿಸುವುದಕ್ಕಾಗಿಯೇ ಒಂದು ದಿನದ ಮಟ್ಟಿಗೆ ವಿಶೇಷ ಅಧಿವೇಶನ ಕರೆಯಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com