ಮಧ್ಯ ಪ್ರದೇಶ ಬಿಕ್ಕಟ್ಟು: ರಾಜ್ಯಪಾಲರ ಭೇಟಿ ಬಳಿಕ ವಿಶ್ವಾಸಮತ ಯಾಚಿಸಲು ಸಿದ್ಧ ಎಂದ ಕಮಲ್ ನಾಥ್

ಮೂರು ದಿನಗಳ ಹಿಂದೆ 22 ಕಾಂಗ್ರೆಸ್ ಬಂಡಾಯ ಶಾಸಕರು ರಾಜೀನಾಮೆ ನೀಡಿರುವುದರಿಂದ ಮಧ್ಯ ಪ್ರದೇಶ ರಾಜಕೀಯದಲ್ಲಿ ಬಿಕ್ಕಟ್ಟು ತಲೆದೋರಿರುವಂತೆ ಮುಖ್ಯಮಂತ್ರಿ ಕಮಲ್ ನಾಥ್ ಅವರು ಶುಕ್ರವಾರ ರಾಜ್ಯಪಾಲ ಲಾಲ್ ಜಿ ಟಂಡನ್ ಅವರನ್ನು ಭೇಟಿ ಮಾಡಿದ್ದಾರೆ.
ಕಮಲ್ ನಾಥ್
ಕಮಲ್ ನಾಥ್
Updated on

ಭೋಪಾಲ್: ಮೂರು ದಿನಗಳ ಹಿಂದೆ 22 ಕಾಂಗ್ರೆಸ್ ಬಂಡಾಯ ಶಾಸಕರು ರಾಜೀನಾಮೆ ನೀಡಿರುವುದರಿಂದ ಮಧ್ಯ ಪ್ರದೇಶ ರಾಜಕೀಯದಲ್ಲಿ ಬಿಕ್ಕಟ್ಟು ತಲೆದೋರಿರುವಂತೆ ಮುಖ್ಯಮಂತ್ರಿ ಕಮಲ್ ನಾಥ್ ಅವರು ಶುಕ್ರವಾರ ರಾಜ್ಯಪಾಲ ಲಾಲ್ ಜಿ ಟಂಡನ್ ಅವರನ್ನು ಭೇಟಿ ಮಾಡಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ ಕಮಲ್ ನಾಥ್ ಅವರು, ಮೂರು ಪುಟಗಳ ಪತ್ರವೊಂದನ್ನು ಸಲ್ಲಿಸಿದ್ದಾರೆ. ಅಲ್ಲದೆ ಬಿಜೆಪಿ ತನ್ನ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

ರಾಜ್ಯಪಾಲರಿಗೆ ಪ್ರಸ್ತುತ ರಾಜಕೀಯ  ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಟ್ಟಿರುವ ಸಿಎಂ ಕಮಲ್ ನಾಥ್ ಅವರು, ನನ್ನ ಸರ್ಕಾರ ಅಸ್ಥಿರಗೊಳಿಸುವುದಕ್ಕಾಗಿ 19 ಕಾಂಗ್ರೆಸ್ ಶಾಸಕರನ್ನು ಅಪಹರಿಸಿ, ತಮ್ಮ ವಶದಲ್ಲಿಟ್ಟುಕೊಂಡಿದ್ದಾರೆ. ಈ ಮೂಲಕ ಬಿಜೆಪಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ. 

ಸೋಮವಾರದಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದ ವೇಳೆ ನನ್ನ ಸರ್ಕಾರ ವಿಶ್ವಾಸಮತ ಯಾಚಿಸಲು ಸಿದ್ಧವಿದೆ ಎಂದು ಕಮಲ್ ನಾಥ್ ಅವರು ಪತ್ರದ ಮೂಲಕ ರಾಜ್ಯಪಾಲರಿಗೆ ತಿಳಿಸಿದ್ದಾರೆ.

ಇನ್ನು ಸಚಿವರು ಸೇರಿದಂತೆ 19 ಮಂದಿ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಬೆಂಗಳೂರಿನ ರೆಸಾರ್ಟ್ ವೊಂದರಲ್ಲಿ ಇರಿಸಿದೆ ಎಂದು ಆಡಳಿತಾರೂಢ ಕಾಂಗ್ರೆಸ್ ಮಾಡಿರುವ ಆರೋಪವನ್ನು ಪ್ರತಿಪಕ್ಷ ಬಿಜೆಪಿ ತಳ್ಳಿಹಾಕಿದೆ.

ಸಿಂಧಿಯಾ ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ,  ಅವರ ಆಪ್ತರಾಗಿರುವ ಆರು ಸಚಿವರು ಸೇರಿದಂತೆ 19 ಮಂದಿ ಶಾಸಕರು ಬೆಂಗಳೂರಿನಿಂದ ಭೋಪಾಲ್ ಗೆ ಬಂದು  ರಾಜೀನಾಮೆ ಪತ್ರವನ್ನು ವಿಧಾನಸಭೆ ಸ್ಪೀಕರ್ ಅವರಿಗೆ ಸಲ್ಲಿಸಲಿದ್ದಾರೆ ಎಂಬ ಅನಧಿಕೃತ ವರದಿಗಳ ನಡುವೆ ಕಮಲ್ ನಾಥ್ ರಾಜ್ಯಪಾಲರನ್ನು ಭೇಟಿ ಮಾಡಿರುವುದು ಮಧ್ಯಪ್ರದೇಶ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com