ಕೊರೊನವೈರಸ್‍: ತ್ರಿಪುರಾದಲ್ಲಿ ನಿಷೇಧಾಜ್ಞೆ ರದ್ದುಪಡಿಸುವಂತೆ ಪ್ರತಿಪಕ್ಷಗಳ ಒತ್ತಾಯ

ಕೊರೊನವೈರಸ್ ಸೋಂಕು ಹರಡುವಿಕೆ ತಡೆಯಲು ಐವರು ಮತ್ತು ಹೆಚ್ಚಿನ ಜನ ಗುಂಪುಗೂಡುವುದನ್ನು ನಿರ್ಬಂಧಿಸಿ ಸೆಕ್ಷನ್ 144ರಡಿ  ಮಾರ್ಚ್ 16 ರಾತ್ರಿ ತ್ರಿಪುರದಾದ್ಯಂತ ವಿಧಿಸಲಾಗಿರು ನಿಷೇಧಾಜ್ಞೆಯನ್ನು ವಾಪಸ್‍ ಪಡೆಯುವಂತೆ ಪ್ರತಿಪಕ್ಷಗಳು ಒತ್ತಾಯಿಸಿವೆ
ಕೊರೊನವೈರಸ್‍: ತ್ರಿಪುರಾದಲ್ಲಿ ನಿಷೇಧಾಜ್ಞೆ ರದ್ದುಪಡಿಸುವಂತೆ ಪ್ರತಿಪಕ್ಷಗಳ ಒತ್ತಾಯ
ಕೊರೊನವೈರಸ್‍: ತ್ರಿಪುರಾದಲ್ಲಿ ನಿಷೇಧಾಜ್ಞೆ ರದ್ದುಪಡಿಸುವಂತೆ ಪ್ರತಿಪಕ್ಷಗಳ ಒತ್ತಾಯ
Updated on

ಅಗರ್ತಲಾ: ಕೊರೊನವೈರಸ್ ಸೋಂಕು ಹರಡುವಿಕೆ ತಡೆಯಲು ಐವರು ಮತ್ತು ಹೆಚ್ಚಿನ ಜನ ಗುಂಪುಗೂಡುವುದನ್ನು ನಿರ್ಬಂಧಿಸಿ ಸೆಕ್ಷನ್ 144ರಡಿ  ಮಾರ್ಚ್ 16 ರಾತ್ರಿ ತ್ರಿಪುರದಾದ್ಯಂತ ವಿಧಿಸಲಾಗಿರು ನಿಷೇಧಾಜ್ಞೆಯನ್ನು ವಾಪಸ್‍ ಪಡೆಯುವಂತೆ ಪ್ರತಿಪಕ್ಷಗಳು ಒತ್ತಾಯಿಸಿವೆ

ಸರ್ಕಾರದ ಈ ಕ್ರಮ ಸಾಮಾನ್ಯ ಜನರಲ್ಲಿ ಆತಂಕ ಉಂಟುಮಾಡಿದೆ. ಜನರು ತಮ್ಮ ಹಕ್ಕಿನ ವಿರುದ್ಧ ಹೋರಾಡುವುದನ್ನು ಹತ್ತಿಕ್ಕುವ ಉದ್ದೇಶವೂ ಇದರಲ್ಲಿದೆ ಎಂದು ಪ್ರತಿಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್  ಆರೋಪಿಸಿದ್ದಾರೆ. ಈ ತಿಂಗಳು ನಿರುದ್ಯೋಗಿಗಳಾಗುವ 10,323 ಹಂಗಾಮಿ ಶಿಕ್ಷಕರು ಸಭೆ ಸೇರುವುದನ್ನು ತಡೆಯಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ದೆಹಲಿ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ, ನಿಷೇಧಾಜ್ಞೆಯಂತಹ ಕ್ರಮಗಳನ್ನು ಎಲ್ಲೂ ಹೇರಿಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com