ಉಸಿರಾಟ ತೊಂದರೆ ಅನುಭವಿಸುತ್ತಿರುವವರಿಗೆ ಕೊರೋನಾ ಪರೀಕ್ಷೆ ನಡೆಸಿ: ಐಸಿಎಂಆರ್

ಕೊರೋನಾ ವೈರಸ್ ನಿರ್ಧರಣಾ ಪರೀಕ್ಷೆಯ ಮಾರ್ಗಸೂಚಿಗಳನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಶನಿವಾರ ಪರಿಷ್ಕರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಕೊರೋನಾ ವೈರಸ್ ನಿರ್ಧರಣಾ ಪರೀಕ್ಷೆಯ ಮಾರ್ಗಸೂಚಿಗಳನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಶನಿವಾರ ಪರಿಷ್ಕರಿಸಿದೆ.

ಹೊಸ ಮಾರ್ಗಸೂಚಿಗಳ ಪ್ರಕಾರ ತೀವ್ರ ಶ್ವಾಸ ಸಂಬಂಧಿ ಸಮಸ್ಯೆ, ಉಸಿರಾಟದ ತೊಂದರೆ, ಜ್ವರ, ಕೆಮ್ಮುನಿಂದಾಗಿ ಆಸ್ಪತ್ರೆಗೆ ದಾಖಲಾದ ಎಲ್ಲಾ ರೋಗಿಗಳಿಗೆ ಕೊರೋನಾವೈರಸ್(ಕೋವಿಡ್ -೧೯) ರೋಗ ನಿರ್ಧರಣ ಪರೀಕ್ಷೆ ನೆಡಸಬೇಕು. ಈ ಸೋಂಕು ಮತ್ತಷ್ಟು ವಿಸ್ತರಿಸದಂತೆ ಸಮಗ್ರ ನಿಯಂತ್ರಣವನ್ನು ಗಮನದಲ್ಲಿಟ್ಟುಕೊಂಡು ಈ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. 

ಕೋವಿಡ್ -೧೯ ಸೋಂಕಿತ ವ್ಯಕ್ತಿ ತನ್ನ ಲಕ್ಷಣಗಳನ್ನು ಮರೆಮಾಚಿ, ಇತರನ್ನು ಭೇಟಿಯಾಗಿದ್ದರೆ, ಅಂತಹ ವ್ಯಕ್ತಿಗಳನ್ನು ಭೇಟಿಯಾದ ದಿನದಿಂದ ೫ ದಿನ, ೧೪ ದಿನ ನಡುವೆ ಒಮ್ಮೆ ಪರೀಕ್ಷೆಗೊಳಪಡಿಸಬೇಕು ಎಂದು ನೂತನ ಮಾರ್ಗಸೂಚಿ ತಿಳಿಸಿದೆ. 

ಕೋವಿಡ್ -೧೯ ಪರೀಕ್ಷೆಗಳ ಸಂಯೋಜಿತ ವಿಧಾನಕ್ಕೆ ಅನುಗುಣವಾಗಿ ಎಲ್ಲರಿಗೂ ವಿಶ್ವಾಸಾರ್ಹ ರೋಗ ನಿರ್ಧರಣೆ ಲಭ್ಯವಾಗುವ ಉದ್ದೇಶವನ್ನು ಈ ತಿದ್ದುಪಡಿ ಹೊಂದಿದೆ.

ಈವರೆಗೆ ದೇಶದಲ್ಲಿ ವರದಿಯಾಗಿರುವ ಕೋವಿಡ್ -೧೯ ಪ್ರಕರಣಗಳು ವಿದೇಶ ಪ್ರಯಾಣಿಕರು ಮತ್ತು ಅವರಿಂದ ಸ್ಥಳೀಯರಿಗೆ ಸೋಂಕು ತಗುಲಿರುವ ಪ್ರಕರಣಗಳಾಗಿವೆ ಎಂದು ಐಸಿಎಂಆರ್ ಹೇಳಿದೆ. ಸಮುದಾಯದ ನಡುವೆ ಸೋಂಕು ಪ್ರಸರಣಗೊಂಡಿರುವ ಪ್ರಕರಣ ಇನ್ನೂ ದಾಖಲಾಗಿಲ್ಲ. ಒಂದು ವೇಳೆ ಅಂತಹ ಪ್ರಕರಣ ಕಂಡುಬಂದರೆ, ಅದಕ್ಕೆ ತಕ್ಕಂತೆ ಪರೀಕ್ಷಾ ಕಾರ್ಯತಂತ್ರ ಅಭಿವೃದ್ಧಿಪಡಿಸಲಾಗುತ್ತದೆ. ಈ ಸಂಬಂಧ ಸಲಹೆಗಳನ್ನು ನಿರಂತರವಾಗಿ ಪರಿಶೀಲಿಸುತ್ತಿದೆ ಎಂದು ಹೇಳಿದೆ.

ನೀತಿ ಆಯೋಗದ ಸದಸ್ಯ ವೈ.ಕೆ. ಪಾಲ್ ಅವರ ಅಧ್ಯಕ್ಷತೆಯ ರಾಷ್ಟ್ರೀಯ ಕಾರ್ಯಪಡೆ ಈ ಕಾರ್ಯತಂತ್ರವನ್ನು ಪರಿಶೀಲಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com