ವಿದೇಶದಲ್ಲಿ ಹನಿಮೂನ್: ಕ್ವಾರೆಂಟೈನ್ ಸೂಚನೆ ಉಲ್ಲಂಘಿಸಿದ ಕೇರಳ ಐಎಎಸ್ ಅಧಿಕಾರಿ ಅಮಾನತು!

ಕೇರಳದ ಕೊಲ್ಲಂ ಜಿಲ್ಲೆಯ ಉಪ ಜಿಲ್ಲಾಧಿಕಾರಿ ಅನುಪಮ್ ಮಿಶ್ರಾ ಹೋಮ್ ಕ್ವಾರೆಂಟೈನ್ ಸೂಟನೆ ಉಲ್ಲಂಘಿಸಿ ಊರಿಗೆ ತೆರಳಿದ್ದರಿಂದ ಅವರನ್ನು ಅಮಾನತು ಮಾಡಲಾಗಿದೆ. 
ಕ್ವಾರಂಟೈನ್
ಕ್ವಾರಂಟೈನ್
Updated on

ಕೊಲ್ಲಂ: ಕೇರಳದ ಕೊಲ್ಲಂ ಜಿಲ್ಲೆಯ ಉಪ ಜಿಲ್ಲಾಧಿಕಾರಿ ಅನುಪಮ್ ಮಿಶ್ರಾ ಹೋಮ್ ಕ್ವಾರೆಂಟೈನ್ ಸೂಟನೆ ಉಲ್ಲಂಘಿಸಿ ಊರಿಗೆ ತೆರಳಿದ್ದರಿಂದ ಅವರನ್ನು ಅಮಾನತು ಮಾಡಲಾಗಿದೆ. 

ಹನಿಮೂನ್ ಹಾಗಿ ವಿದೇಶಕ್ಕೆ ತೆರಳಿದ್ದ ಅನುಪಮ್ ಮಿಶ್ರಾ ಅವರು ಮಾರ್ಚ್ 18ರಂದು ಸಿಂಗಾಪುರದಿಂದ ಸ್ವದೇಶಕ್ಕೆ ವಾಪಸ್ಸಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಕ್ವಾರಂಟೈನ್ ಗೆ ಸೂಚಿಸಲಾಗಿತ್ತು. 

ಆದರೆ ಈ ನಿಯಮವನ್ನು ಉಲ್ಲಂಘಿಸಿ ಅನುಪಮ್ ಮಿಶ್ರಾ ಅವರು ಕಾನ್ಪುರಕ್ಕೆ ತೆರಳಿದ್ದಾರೆ. ಈ ವಿಷಯ ತಿಳಿದು ಕೊಲ್ಲಂ ಜಿಲ್ಲಾಧಿಕಾರಿ ಬಿ. ಅಬ್ದುಲ್ ನಾಸರ್ ಕೇರಳ ಸರ್ಕಾರದ ಗಮನಕ್ಕೆ ತಂದಿದ್ದು ಸರ್ಕಾರ ಮಿಶ್ರಾರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com