21 ದಿನಗಳ ಭಾರತ ಲಾಕ್ ಡೌನ್ ವಿಸ್ತರಿಸುವ ಯಾವುದೇ ಚಿಂತನೆಗಳಿಲ್ಲ: ಸಂಪುಟ ಕಾರ್ಯದರ್ಶಿ

21 ದಿನಗಳ ಲಾಕ್ ಡೌನ್ ನ್ನು ವಿಸ್ತರಿಸುವ ಯಾವುದೇ ಚಿಂತನೆಗಳಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬ ಹೇಳಿದ್ದಾರೆ.
21 ದಿನಗಳ ಭಾರತ ಲಾಕ್ ಡೌನ್ ವಿಸ್ತರಿಸುವ ಯಾವುದೇ ಚಿಂತನೆಗಳಿಲ್ಲ: ಸಂಪುಟ ಕಾರ್ಯದರ್ಶಿ

ನವದೆಹಲಿ: 21 ದಿನಗಳ ಲಾಕ್ ಡೌನ್ ನ್ನು ವಿಸ್ತರಿಸುವ ಯಾವುದೇ ಚಿಂತನೆಗಳಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈಗಿರುವ 21 ದಿನಗಳ ಲಾಕ್ ಡೌನ್ ನ್ನು ಮತ್ತಷ್ಟು ದಿನಗಳವರೆಗೆ ವಿಸ್ತರಿಸುತ್ತದೆ ಎಂದು ಕೇಳಿಬರುತ್ತಿರುವ ಸುದ್ದಿಗಳು ಕೇವಲ ವದಂತಿಯಷ್ಟೆ. ಅದು ನಿಜವಲ್ಲ, ಸರ್ಕಾರದ ಮುಂದೆ ಅಂತಹ ಯಾವುದೇ ಚಿಂತನೆಗಳಿಲ್ಲ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com