ದೇಶ
ನರೇಗಾ ಯೋಜನೆಯಡಿ 27.5 ಲಕ್ಷ ಕಾರ್ಮಿಕರ ಬ್ಯಾಂಕ್ ಖಾತೆಗೆ 611 ಕೋಟಿ ವರ್ಗಾಯಿಸಿದ ಸಿಎಂ ಯೋಗಿ ಆದಿತ್ಯನಾಥ್!
21 ದಿನಗಳ ಲಾಕ್ ಡೌನ್ ಹಿನ್ನೆಲೆಯಲ್ಲಿ ದಿನಗೂಲಿ ಕೆಲಸಗಾರರು ಕಂಗಲಾಗಿದ್ದರು. ಇದಕ್ಕೆ ಯೋಗಿ ಆದಿತ್ಯನಾಥ್ ಸರ್ಕಾರ ನರೇಗಾ ಯೋಜನೆಯಡಿ 27.5 ಲಕ್ಷ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ 611 ಕೋಟಿ ರುಪಾಯಿಯನ್ನು ವರ್ಗಾಹಿಸಿದೆ.
ಲಖನೌ: 21 ದಿನಗಳ ಲಾಕ್ ಡೌನ್ ಹಿನ್ನೆಲೆಯಲ್ಲಿ ದಿನಗೂಲಿ ಕೆಲಸಗಾರರು ಕಂಗಲಾಗಿದ್ದರು. ಇದಕ್ಕೆ ಯೋಗಿ ಆದಿತ್ಯನಾಥ್ ಸರ್ಕಾರ ನರೇಗಾ ಯೋಜನೆಯಡಿ 27.5 ಲಕ್ಷ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ 611 ಕೋಟಿ ರುಪಾಯಿಯನ್ನು ವರ್ಗಾಹಿಸಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಖನೌದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ರಾಜ್ಯದಲ್ಲಿ ಪತ್ತೆಯಾಗಿರುವ 75 ಕೊರೋನಾ ಪ್ರಕರಣಗಳ ಬಗ್ಗೆ ಚರ್ಚಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಭಾರತದಲ್ಲಿ ಒಟ್ಟು ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 1071ಕ್ಕೇರಿದ್ದು ಸಾವಿನ ಸಂಖ್ಯೆ 31ಕ್ಕೇರಿದೆ.