ಪಶ್ಚಿಮ ಬಂಗಾಳದಲ್ಲಿ ಕೊರೋನಾ ಸೋಂಕಿಗೆ ಮತ್ತೊಬ್ಬರು ಬಲಿ, ಭಾರತದಲ್ಲಿ ಮೃತರ ಸಂಖ್ಯೆ 29ಕ್ಕೆ ಏರಿಕೆ

ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ ವ್ಯಕ್ತಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೋನಾ ಮಾರಿಗೆ ಬಲಿಯಾದವರ ಸಂಖ್ಯೆ ಸೋಮವಾರ 29ಕ್ಕೇರಿದೆ. ಪಶ್ಚಿಮ ಬಂಗಾಳದಲ್ಲಿ ಇದು ಎರಡನೇ ಮೃತ ಪ್ರಕರಣವಾಗಿದೆ.
ಕೂಲಿ ಕಾರ್ಮಿಕಳು ತನ್ನೂರಿಗೆ ಹೋಗುತ್ತಿರುವುದು
ಕೂಲಿ ಕಾರ್ಮಿಕಳು ತನ್ನೂರಿಗೆ ಹೋಗುತ್ತಿರುವುದು
Updated on

ನವದೆಹಲಿ:ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ ವ್ಯಕ್ತಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೋನಾ ಮಾರಿಗೆ ಬಲಿಯಾದವರ ಸಂಖ್ಯೆ ಸೋಮವಾರ 29ಕ್ಕೇರಿದೆ. ಪಶ್ಚಿಮ ಬಂಗಾಳದಲ್ಲಿ ಇದು ಎರಡನೇ ಮೃತ ಪ್ರಕರಣವಾಗಿದೆ.

ದೇಶದಲ್ಲಿ ಇದುವರೆಗೆ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 1100ರ ಗಡಿ ದಾಟಿದೆ. ವಲಸಿಗರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲಾ ರಾಜ್ಯ ಮತ್ತು ಜಿಲ್ಲಾ ಗಡಿಗಳನ್ನು ಮುಚ್ಚುವಂತೆ ಕೇಂದ್ರ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈಗಾಗಲೇ ಗಡಿಗಳ ಮೂಲಕ ಸಂಚರಿಸಿರುವ ವಲಸಿಗರನ್ನು 14 ದಿನಗಳ ಕಾಲ ನಿರ್ಬಂಧದಲ್ಲಿಡುವಂತೆ ಸೂಚಿಸಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 23 ಹೊಸ ಕೇಸುಗಳು ದಾಖಲಾಗಿದ್ದು ಇಲ್ಲಿ ಒಟ್ಟು ಸೋಂಕಿತರ ಸಂಖ್ಯೆ 72ಕ್ಕೇರಿದೆ. ಪಕ್ಕದ ನೊಯ್ಡಾ, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಹೆಚ್ಚು ಕೊರೋನಾ ಸೋಂಕಿತ ಕೇಸುಗಳು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com