ಹಂದ್ವಾರದಲ್ಲಿ ಹುತಾತ್ಮರಾದ ಯೋಧರ ಪರಾಕ್ರಮ,ತ್ಯಾಗ ಎಂದಿಗೂ ಮರೆಯಲಾಗದು-ಪ್ರಧಾನಿ

ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭಾನುವಾರ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿ ಪ್ರಧಾನಿ ನರೇಂದ್ರಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದು, ಹುತಾತ್ಮ ಯೋಧರ ಪರಾಕ್ರಮ ಮತ್ತು ತ್ಯಾಗ ಎಂದಿಗೂ ಮರೆಯಲಾಗುವುದಿಲ್ಲ ಎಂದು ಹೇಳಿದ್ದಾರೆ
ಹುತಾತ್ಮ ಯೋಧರ ಪಾರ್ಥೀವ ಶರೀರ, ಪ್ರಧಾನಿ ಮೋದಿ
ಹುತಾತ್ಮ ಯೋಧರ ಪಾರ್ಥೀವ ಶರೀರ, ಪ್ರಧಾನಿ ಮೋದಿ
Updated on

ನವದೆಹಲಿ: ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭಾನುವಾರ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿ ಪ್ರಧಾನಿ ನರೇಂದ್ರಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದು, ಹುತಾತ್ಮ ಯೋಧರ ಪರಾಕ್ರಮ ಮತ್ತು ತ್ಯಾಗ ಎಂದಿಗೂ ಮರೆಯಲಾಗುವುದಿಲ್ಲ ಎಂದು ಹೇಳಿದ್ದಾರೆ

ಹಂದ್ವಾರದಲ್ಲಿ ಹುತಾತ್ಮರಾದ ಧೈರ್ಯವಂತ ಯೋಧರು ಮತ್ತು ಭದ್ರತಾ ಸಿಬ್ಬಂದಿಗೆ ಗೌರವ ನಮನಗಳು. ಅವರ ತ್ಯಾಗ ಮತ್ತು ಶೌರ್ಯ ಎಂದಿಗೂ ಮರೆಯಲಾಗದು ಎಂದು ಪ್ರಧಾನಿ ಟ್ವೀಟ್ ನಲ್ಲಿ ಹೇಳಿದ್ದಾರೆ

ಹುತಾತ್ಮ ಯೋಧರು ಸಮರ್ಪಣಾ ಮನೋಭಾವದಿಂದ ನಾಗರಿಕರ ರಕ್ಷಣೆಗೆ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಪ್ರಧಾನಿಯವರು ಹುತಾತ್ಮರ ಕುಟುಂಬಗಳಿಗೆ ಮತ್ತು ಅವರ ಸ್ನೇಹಿತರಿಗೆ ಸಂತ್ವಾನ  ಹೇಳಿದ್ದಾರೆ

ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಲ್ ಮತ್ತು ಮೇಜರ್ ವೊಬ್ಬರು ಸೇರಿದಂತೆ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. 

ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಹಂದ್ವಾರದ ಚಾಂಜ್ ಮುಲ್ಲಾ ನಲ್ಲಿ ಶನಿವಾರ ಸಂಜೆ ಶೋಧ ಕಾರ್ಯಾಚರಣೆ ಆರಂಭಿಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com