ನವದೆಹಲಿ: ಪಾಕಿಸ್ತಾನದ ಭಯೋತ್ಪಾದನೆಗೆ ಭಾರತ ತಕ್ಕ ಪ್ರತಿಕ್ರಿಯೆ ನೀಡಲಿದೆ ಎಂದು ಸೇನಾ ಮುಖ್ಯಸ್ಥ ಎಂಎಂ ನರಾವಣೆ ಹೇಳಿದ್ದಾರೆ.
ಜಮ್ಮು-ಕಾಶ್ಮೀರದೊಳಗೆ ಭಯೋತ್ಪಾದಕರನ್ನು ನುಗ್ಗಿಸುವ ತಂತ್ರವನ್ನು ಪಾಕಿಸ್ತಾನ ಇಂದಿಗೂ ಮುಂದುವರೆಸಿಕೊಂಡು ಬರುತ್ತಿದೆ. ಇದಕ್ಕೆ ಭಾರತ ಸೂಕ್ತ ಸಮಯದಲ್ಲಿ ತಕ್ಕ ಪ್ರತ್ಯುತ್ತರ ನೀಡಲಿದ್ದೇವೆ ಎಂದು ಅವರು ಹೇಳಿದ್ದಾರೆ.
ಪಿಟಿಐ ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು ಪಾಕಿಸ್ತಾನದ ಭಯೋತ್ಪಾದನೆ ಹಾಗೂ ಉಗ್ರವಾದದ ಬೆಂಬಲ, ಕದನ ವಿರಾಮ ಉಲ್ಲಂಘನೆ ನಿಲ್ಲುವವರೆಗೂ ಭಾರತ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ಎಚ್ಚರಿಸಿದ್ದಾರೆ.
ಇದೇ ವೇಳೆ ಹಂದ್ವಾರ ಎನ್ ಕೌಂಟರ್ ಬಗ್ಗೆಯೂ ಮಾತನಾಡಿರುವ ಸೇನಾ ಮುಖ್ಯಸ್ಥ ನರಾವಣೆ, ಭಯೋತ್ಪಾದಕರಿಂದ ಸಾಮಾನ್ಯ ಜನರನ್ನು ರಕ್ಷಿಸಲು ಐವರು ಭದ್ರತಾ ಸಿಬ್ಬಂದಿಗಳು ಪ್ರಾಣತ್ಯಾಗ ಮಾಡಿರುವುದರ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ.
Advertisement