ಲಾಕ್ ಡೌನ್ ವೇಳೆ ಕಾಶ್ಮೀರವನ್ನು ಬಿಂಬಿಸಿದ್ದ ಮೂವರು ಭಾರತೀಯ ಫೋಟೋ ಜರ್ನಲಿಸ್ಟ್'ಗಳಿಗೆ ಪ್ರತಿಷ್ಟಿತ ಪುಲಿಟ್ಜರ್ ಪ್ರಶಸ್ತಿ

ಲಾಕ್ ಡೌನ್ ವೇಳೆಯ ಕಾಶ್ಮೀರ ಚಿತ್ರೀಕರಿಸಿದ್ದ ಮೂವರು ಭಾರತೀಯ ಫೋಟೋ ಜರ್ನಲಿಸ್ಟ್'ಗಳಿಗೆ  ಪ್ರತಿಷ್ಟಿತ ಪುಲಿಟ್ಜರ್ ಪ್ರಶಸ್ತಿ ಒಲಿದು ಬಂದಿದೆ.
ಪ್ರಶಸ್ತಿಗೆದ್ದ ಭಾಜನರಾದ ಪತ್ರಕರ್ತರು
ಪ್ರಶಸ್ತಿಗೆದ್ದ ಭಾಜನರಾದ ಪತ್ರಕರ್ತರು
Updated on

ನ್ಯೂಯಾರ್ಕ್: ಲಾಕ್ ಡೌನ್ ವೇಳೆಯ ಕಾಶ್ಮೀರ ಚಿತ್ರೀಕರಿಸಿದ್ದ ಮೂವರು ಭಾರತೀಯ ಫೋಟೋ ಜರ್ನಲಿಸ್ಟ್'ಗಳಿಗೆ ಪ್ರತಿಷ್ಟಿತ ಪುಲಿಟ್ಜರ್ ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು (370) ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಒಂದು ವರ್ಷದ ವರೆಗೆ ಕಣಿವೆ ರಾಜ್ಯವನ್ನು ಸಂಪೂರ್ಣ ಲಾಕ್‌ಡೌನ್ ಮಾಡಿತ್ತು. ಸೂಕ್ಷ್ಮ ಪ್ರದೇಶಗಳಲ್ಲಿ ಕರ್ಪ್ಯೂ ವಿಧಿಸಿತ್ತು.

ಈ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಎಪಿ ಸುದ್ದಿಸಂಸ್ಥೆಗೆ ಕಾರ್ಯನಿರ್ವಹಿಸುತ್ತಿದ್ದ ದಾರ್ ಯಾಸೀನ್, ಮುಕ್ತಾರ್ ಖಾನ್ ಮತ್ತು ಚನ್ನಿ ಆನಂದ್ ಅವರು ತೆಗೆಯಲಾಗಿದ್ದ ಛಾಯಾಚಿತ್ರಗಳು (Feature Photos) ಅವರಿಗೆ ಪುಲಿಟ್ಜರ್ ಪ್ರಶಸ್ತಿ ತಂದು ಕೊಟ್ಟಿವೆ.

ಆ ಮೂಲಕ ಈ ಮೂವರು ಭಾರತೀಯ ಫೋಟೋ ಜರ್ನಲಿಸ್ಟ್'ಗಳು ಪತ್ರಿಕೋದ್ಯಮದ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com