ವಿಶಾಖಪಟ್ಟಣಂ ಬಳಿಕ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್, 7 ಮಂದಿ ಅಸ್ವಸ್ಥ, 3 ಮಂದಿ ಚಿಂತಾಜನಕ!

ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆಯಾಗಿ 11 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್ ಆಗಿದ್ದು ಆತಂಕ ಸೃಷ್ಟಿಸಿದೆ.
ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ
Updated on

ರಾಯಗಢ(ಛತ್ತೀಸಗಢ): ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆಯಾಗಿ 11 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್ ಆಗಿದ್ದು ಆತಂಕ ಸೃಷ್ಟಿಸಿದೆ.

ಛತ್ತೀಸಗಢದ ರಾಯಗಢ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಪೇಪರ್ ಮಿಲ್ ಅನ್ನು ಶುದ್ಧಿಕರಿಸುತ್ತಿದ್ದ ವೇಳೆ ವಿಷಾನಿಲ ಸೋರಿಕೆಯಾಗಿದೆ. ಈ ವೇಳೆ ಏಳು ಮಂದಿ ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. 

ಘಟನೆಯ ಬಗ್ಗೆ ನಮಗೆ ಮಾಹಿತಿ ಸಿಕ್ಕಿಲ್ಲ. ಆಸ್ಪತ್ರೆಯಿಂದ ನಾವು ಈ ಬಗ್ಗೆ ತಿಳಿದುಕೊಂಡಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ರಾಯಗಢ) ಸಂತೋಷ್ ಸಿಂಗ್ ಹೇಳಿದ್ದಾರೆ.

ಕಳೆದ ರಾತ್ರಿ ಸೋರಿಕೆ ಪ್ರಾರಂಭವಾಗಿದ್ದು, ಬೀಗ ಹಾಕಿ ಮುಚ್ಚಲಾಗಿದ್ದು, ಶೀಘ್ರದಲ್ಲೇ ಮತ್ತೆ ತೆರೆಯುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com