ತಬ್ಲಿಘಿ ಜಮಾತ್ ನ ಬ್ಯಾಂಕ್ ಖಾತೆ ಮುಟ್ಟುಗೋಲು, ವಹಿವಾಟಿಗೆ ನಿರ್ಬಂಧ! 

ತಬ್ಲಿಘಿ ಜಮಾತ್ ಗೆ ಸಂಬಂಧಿಸಿದ್ದ ಬ್ಯಾಂಕ್ ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗಿದ್ದು, ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ. 
ತಬ್ಲಿಘಿ ಜಮಾತ್ (ಸಂಗ್ರಹ ಚಿತ್ರ)
ತಬ್ಲಿಘಿ ಜಮಾತ್ (ಸಂಗ್ರಹ ಚಿತ್ರ)
Updated on

ನವದೆಹಲಿ: ತಬ್ಲಿಘಿ ಜಮಾತ್ ಗೆ ಸಂಬಂಧಿಸಿದ್ದ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ. 

ತನಿಖಾ ಸಂಸ್ಥೆಗಳ ಸೂಚನೆ ಮೇರೆಗೆ ಬ್ಯಾಂಕ್ ಗಳು ಈ ಕ್ರಮವನ್ನು ಜಾರಿಗೊಳಿಸಿದ್ದು ತಮ್ಲಿಘಿ ಜಮಾತ್ ಗೆ ಸಂಬಂಧಪಟ್ಟ ಖಾತೆದಾರರು ಯಾರೂ ಸಹ ಖಾತೆಯಿಂದ ವಹಿವಾಟು ನಡೆಸುವಂತಿಲ್ಲ. ಈ ಕ್ರಮವನ್ನು ತಬ್ಲಿಘಿ ಜಮಾತ್ ನ ಮೌಲಾನ ಸಾದ್ ನ ವಿರುದ್ಧ ಸಾಕ್ಷ್ಯ ಸಂಗ್ರಹ ಹಾಗೂ ಆತನನ್ನು ಬಂಧಿಸುವುದಕ್ಕಾಗಿ ಕೈಗೊಳ್ಳಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

ಕೊರೋನಾ ತಡೆಗೆ ಲಾಕ್ ಡೌನ್ ಘೋಷಣೆಯಾದ ಬಳಿಕವೂ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ದೆಹಲಿಯಲ್ಲಿ ತಬ್ಲಿಘಿ ಜಮಾತ್ ನ ಧಾರ್ಮಿಕ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಭಾಗಿಯಾದವರು ದೇಶದ ವಿವಿಧ ಭಾಗಗಳಿಗೆ ತೆರಳಿದ್ದರು. ಈ ಬೆಳವಣಿಗೆ ಬಳಿಕ ಕೊರೋನಾ ಸೋಂಕು ಹೆಚ್ಚಿತ್ತು. ನಂತರದ ದಿನಗಳಲ್ಲಿ ಮೌಲಾನಾ ಸಾದ್ 40 ದಿನಗಳ ಕಾಲ ತಲೆಮರೆಸಿಕೊಂಡಿದ್ದು ಆತನನ್ನು ಪೊಲೀಸರು ಹುಡುಕುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com